ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾಳಿಗೂ ಎರಡು ದಿನ ಮೊದಲೇ ಎಚ್ಚರಿಕೆ ನೀಡಿತ್ತು ಆ ವಿಡಿಯೋ!

|
Google Oneindia Kannada News

Recommended Video

Pulwama : ಯೋಧರ ಮೇಲಿನ ದಾಳಿಗೂ ಮುನ್ನ ಉಗ್ರ ಹೇಳಿದ್ದೇನು ಗೊತ್ತಾ? | Oneindia Kannada

ಶ್ರೀನಗರ, ಫೆಬ್ರವರಿ 15: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕ ನಡೆವ ಎರಡು ದಿನ ಮೊದಲೇ 'ತಾನು ಇನ್ನೆರಡು ದಿನದಲ್ಲಿ ಉಗ್ರದಾಳಿ ನಡೆಸುವುದಾಗಿ' ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ಎಚ್ಚರಿಕೆ ನೀಡಿತ್ತು. ಹೀಗೆ ಎಚ್ಚರಿಕೆ ನೀಡಿದ ವಿಡಿಯೋವನ್ನೂ ಅದು ಆನ್ ಲೈನ್ ಮೂಲಕ ಹರಿಬಿಟ್ಟಿತ್ತು!

ಅಫಘಾನಿಸ್ತಾನದಲ್ಲಿ ನಡೆದ ಇಂಥದೇ ಘಟನೆಯ ವಿಡಿಯೋವನ್ನು ಅಪ್ಲೋಡ್ ಮಾಡಿ, ಇಂಥದೇ ಘಟನೆ ಭಾರತದಲ್ಲೂ ನಡೆಯಲಿದೆ ಎಂದು ಅದು ಆನ್ ಲೈನ್ ನಲ್ಲಿ ಪೋಸ್ಟ್ ಮಾಡಿತ್ತು.

ಆತ್ಮಾಹುತಿ ದಾಳಿಕೋರ ಆದಿಲ್ ಎಲ್ಲಿಯವ? ಜೈಷ್ ಆತನನ್ನು ಆರಿಸಿದ್ದೇಕೆ?ಆತ್ಮಾಹುತಿ ದಾಳಿಕೋರ ಆದಿಲ್ ಎಲ್ಲಿಯವ? ಜೈಷ್ ಆತನನ್ನು ಆರಿಸಿದ್ದೇಕೆ?

ಜಮ್ಮು-ಕಾಶ್ಮೀರದ ಅಪರಾಧ ತನಿಖಾ ವಿಭಾಗದ ಅಧಿಕಾರಿಗಳು ಈ ವಿಡಿಯೋ ಮತ್ತಿತರ ಮಾಹಿತಿಯನ್ನು ಗುಪ್ತಚರ ಇಲಾಖೆಯೊಂದಿಗೆ ಹಂಚಿಕೊಂಡಿದ್ದರು. ಆದರೆ ಗುಪ್ತಚರ ಇಲಾಖೆ ಇದನ್ನು ಗಂಭಿರವಾಗಿ ತೆಗೆದುಕೊಳ್ಳದ ಕಾರಣ ಈ ಘಟನೆ ಸಂಭವಿಸಿತು ಎಂದು ಮೂಲಗಳು ಹೇಳುತ್ತಿವೆ.

ನಿರ್ಲಕ್ಷ್ಯಿಸಿದ್ದು ನಿಜವೇ?

ನಿರ್ಲಕ್ಷ್ಯಿಸಿದ್ದು ನಿಜವೇ?

ಇಂಥದೊಂದು ಉಗ್ರ ದಾಳಿ ನಡೆವ ಸೂಚನೆ ಸಿಕ್ಕರೂ ನಿರ್ಲಕ್ಷ್ಯ ಮಾಡಲಾಯ್ತೇ? ಭದ್ರತಾ ಇಲಾಖೆಯ ಮೂಲಗಳು ತಿಳಿಸುವಂತೆ ಈ ಸೂಚನೆ ಸಿಗುತ್ತಿದ್ದಂತೆಯೇ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಹೆಚ್ಚು ಸಮಯವಿರಲಿಲ್ಲ. ಆತ್ಮಾಹುತಿ ದಾಳಿಕೋರ ಯಾರು, ಆತನನ್ನು ತಡೆಯುವುದು ಹೇಗೆ ಎಂಬುದಕ್ಕೆ ಪರಿಹಾರ ದೊರಕಿರಲಿಲ್ಲ.

ಘಟನೆ ತಪ್ಪಿಸುವುದಕ್ಕೆ ಸಾಧ್ಯವಿತ್ತೆ?

ಘಟನೆ ತಪ್ಪಿಸುವುದಕ್ಕೆ ಸಾಧ್ಯವಿತ್ತೆ?

ಈ ವಿಷಯ ತಿಳಿಯುತ್ತಿದ್ದಂತೆಯೇ ಸಿಆರ್ ಪಿಎಫ್ ವಾಹನಗಳು ಚಲಿಸುವ ಮಾರ್ಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಯೋಜನೆ ರೂಪಿಸಲಾಗಿತ್ತು. ಆದರೆ ಇದು ಸಾಕಷ್ಟು ವಾಹನ ಸಮದಣಿ ಇರುವ ಪ್ರದೇಶವಾಗಿದ್ದರಿಂದ ಹಗಲು ಹೊತ್ತಲ್ಲಿ ಎಲ್ಲಾ ವಾಹನಗಳನ್ನೂ ತಡೆದು, ತಪಾಸಣೆ ಮಾಡುವುದು ಕಷ್ಟ. ಆದ್ದರಿಂದ ಸಂಜೆಯ ಸಮಯದಲ್ಲಿ ಸಂಚಾರ ಹೆಚ್ಚಿಲ್ಲದ ಸಮಯದಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಇರುವ ವಾಹನವನ್ನು ಕಳಿಸುವುದು ಎಂದು ನಿರ್ಧರಿಸಲಾಗಿತ್ತು.

ವಿಡಿಯೋ: ಅತ್ಮಾಹುತಿ ದಾಳಿಗೂ ಮುನ್ನ ಜೈಷ್ ಉಗ್ರ ಆದಿಲ್ ಹೇಳಿದ್ದೇನು?ವಿಡಿಯೋ: ಅತ್ಮಾಹುತಿ ದಾಳಿಗೂ ಮುನ್ನ ಜೈಷ್ ಉಗ್ರ ಆದಿಲ್ ಹೇಳಿದ್ದೇನು?

ಸ್ಫೋಟಕ ಹೊತ್ತ ಕಾರಿನ ತಪಾಸಣೆ ಮಾಡಿರಲಿಲ್ಲವೇ?

ಸ್ಫೋಟಕ ಹೊತ್ತ ಕಾರಿನ ತಪಾಸಣೆ ಮಾಡಿರಲಿಲ್ಲವೇ?

ನಿರ್ಧರಿಸಿದಂತೆಯೇ ವಾಹನಗಳ ತಪಾಸಣೆ ಮಾಡಲಾಗಿತ್ತು. ಆದರೆ ಯಾವುದೇ ವಾಹನದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ. ಸ್ಫೋಟಕಗಳನ್ನು ಯಾರಿಗೂ ಕಾಣದಂತೆ ಕಾರಿನಲ್ಲಿ ಬಚ್ಚಿಡಲಾಗಿತ್ತೇ? ಅಥವಾ ಈ ವಾಹನ ತಪಾಸಣಾಕಾರರ ಕಣ್ಣು ತಪ್ಪಿಸಿ ಮುಂದೆ ಸಾಗಿತ್ತೆ ಎಂಬುದು ಅರ್ಥವಾಗದ ವಿಷಯ.

19 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ದಾಳಿ19 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ದಾಳಿ

44 ಸೈನಿಕರು ಹುತಾತ್ಮ

44 ಸೈನಿಕರು ಹುತಾತ್ಮ

ಗುರುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪೊರ ಎಂಬಲ್ಲಿ ತೆರಳುತ್ತಿದ್ದ ಸಿಆರ್ ಪಿಎಫ್ ವಾಹನದ ಮೇಲೆ ಆತ್ಮಾಹುತಿ ದಾಳಿಕೋರ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ಅಹ್ಮದ್ ದಾರ್ ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಡಿಕ್ಕಿ ಹೊಡೆಸಿದ ಪರಿಣಾಮ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾದರು.

ಪುಲ್ವಾಮ ಉಗ್ರರ ದಾಳಿಯಲ್ಲಿ ಆರ್‌ಡಿಎಕ್ಸ್ ಬಳಕೆ?ಪುಲ್ವಾಮ ಉಗ್ರರ ದಾಳಿಯಲ್ಲಿ ಆರ್‌ಡಿಎಕ್ಸ್ ಬಳಕೆ?

English summary
Pakistan-based terror group Jaish-e-Mohammad, which has claimed responsibility for ramming a car full of explosives into the 78-vehicle convoy, had warned of a suicide attack in Kashmir just two days ago, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X