ದಾಳಿಗೂ ಎರಡು ದಿನ ಮೊದಲೇ ಎಚ್ಚರಿಕೆ ನೀಡಿತ್ತು ಆ ವಿಡಿಯೋ!
Recommended Video

ಶ್ರೀನಗರ, ಫೆಬ್ರವರಿ 15: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕ ನಡೆವ ಎರಡು ದಿನ ಮೊದಲೇ 'ತಾನು ಇನ್ನೆರಡು ದಿನದಲ್ಲಿ ಉಗ್ರದಾಳಿ ನಡೆಸುವುದಾಗಿ' ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ಎಚ್ಚರಿಕೆ ನೀಡಿತ್ತು. ಹೀಗೆ ಎಚ್ಚರಿಕೆ ನೀಡಿದ ವಿಡಿಯೋವನ್ನೂ ಅದು ಆನ್ ಲೈನ್ ಮೂಲಕ ಹರಿಬಿಟ್ಟಿತ್ತು!
ಅಫಘಾನಿಸ್ತಾನದಲ್ಲಿ ನಡೆದ ಇಂಥದೇ ಘಟನೆಯ ವಿಡಿಯೋವನ್ನು ಅಪ್ಲೋಡ್ ಮಾಡಿ, ಇಂಥದೇ ಘಟನೆ ಭಾರತದಲ್ಲೂ ನಡೆಯಲಿದೆ ಎಂದು ಅದು ಆನ್ ಲೈನ್ ನಲ್ಲಿ ಪೋಸ್ಟ್ ಮಾಡಿತ್ತು.
ಜಮ್ಮು-ಕಾಶ್ಮೀರದ ಅಪರಾಧ ತನಿಖಾ ವಿಭಾಗದ ಅಧಿಕಾರಿಗಳು ಈ ವಿಡಿಯೋ ಮತ್ತಿತರ ಮಾಹಿತಿಯನ್ನು ಗುಪ್ತಚರ ಇಲಾಖೆಯೊಂದಿಗೆ ಹಂಚಿಕೊಂಡಿದ್ದರು. ಆದರೆ ಗುಪ್ತಚರ ಇಲಾಖೆ ಇದನ್ನು ಗಂಭಿರವಾಗಿ ತೆಗೆದುಕೊಳ್ಳದ ಕಾರಣ ಈ ಘಟನೆ ಸಂಭವಿಸಿತು ಎಂದು ಮೂಲಗಳು ಹೇಳುತ್ತಿವೆ.

ನಿರ್ಲಕ್ಷ್ಯಿಸಿದ್ದು ನಿಜವೇ?
ಇಂಥದೊಂದು ಉಗ್ರ ದಾಳಿ ನಡೆವ ಸೂಚನೆ ಸಿಕ್ಕರೂ ನಿರ್ಲಕ್ಷ್ಯ ಮಾಡಲಾಯ್ತೇ? ಭದ್ರತಾ ಇಲಾಖೆಯ ಮೂಲಗಳು ತಿಳಿಸುವಂತೆ ಈ ಸೂಚನೆ ಸಿಗುತ್ತಿದ್ದಂತೆಯೇ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಹೆಚ್ಚು ಸಮಯವಿರಲಿಲ್ಲ. ಆತ್ಮಾಹುತಿ ದಾಳಿಕೋರ ಯಾರು, ಆತನನ್ನು ತಡೆಯುವುದು ಹೇಗೆ ಎಂಬುದಕ್ಕೆ ಪರಿಹಾರ ದೊರಕಿರಲಿಲ್ಲ.

ಘಟನೆ ತಪ್ಪಿಸುವುದಕ್ಕೆ ಸಾಧ್ಯವಿತ್ತೆ?
ಈ ವಿಷಯ ತಿಳಿಯುತ್ತಿದ್ದಂತೆಯೇ ಸಿಆರ್ ಪಿಎಫ್ ವಾಹನಗಳು ಚಲಿಸುವ ಮಾರ್ಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಯೋಜನೆ ರೂಪಿಸಲಾಗಿತ್ತು. ಆದರೆ ಇದು ಸಾಕಷ್ಟು ವಾಹನ ಸಮದಣಿ ಇರುವ ಪ್ರದೇಶವಾಗಿದ್ದರಿಂದ ಹಗಲು ಹೊತ್ತಲ್ಲಿ ಎಲ್ಲಾ ವಾಹನಗಳನ್ನೂ ತಡೆದು, ತಪಾಸಣೆ ಮಾಡುವುದು ಕಷ್ಟ. ಆದ್ದರಿಂದ ಸಂಜೆಯ ಸಮಯದಲ್ಲಿ ಸಂಚಾರ ಹೆಚ್ಚಿಲ್ಲದ ಸಮಯದಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಇರುವ ವಾಹನವನ್ನು ಕಳಿಸುವುದು ಎಂದು ನಿರ್ಧರಿಸಲಾಗಿತ್ತು.

ಸ್ಫೋಟಕ ಹೊತ್ತ ಕಾರಿನ ತಪಾಸಣೆ ಮಾಡಿರಲಿಲ್ಲವೇ?
ನಿರ್ಧರಿಸಿದಂತೆಯೇ ವಾಹನಗಳ ತಪಾಸಣೆ ಮಾಡಲಾಗಿತ್ತು. ಆದರೆ ಯಾವುದೇ ವಾಹನದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ. ಸ್ಫೋಟಕಗಳನ್ನು ಯಾರಿಗೂ ಕಾಣದಂತೆ ಕಾರಿನಲ್ಲಿ ಬಚ್ಚಿಡಲಾಗಿತ್ತೇ? ಅಥವಾ ಈ ವಾಹನ ತಪಾಸಣಾಕಾರರ ಕಣ್ಣು ತಪ್ಪಿಸಿ ಮುಂದೆ ಸಾಗಿತ್ತೆ ಎಂಬುದು ಅರ್ಥವಾಗದ ವಿಷಯ.

44 ಸೈನಿಕರು ಹುತಾತ್ಮ
ಗುರುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪೊರ ಎಂಬಲ್ಲಿ ತೆರಳುತ್ತಿದ್ದ ಸಿಆರ್ ಪಿಎಫ್ ವಾಹನದ ಮೇಲೆ ಆತ್ಮಾಹುತಿ ದಾಳಿಕೋರ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ಅಹ್ಮದ್ ದಾರ್ ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಡಿಕ್ಕಿ ಹೊಡೆಸಿದ ಪರಿಣಾಮ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾದರು.
-
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ -
ಏಪ್ರಿಲ್ 8ಕ್ಕೆ ದ್ವಿತೀಯ PUC ಫಲಿತಾಂಶ? ಶಿಕ್ಷಣ ಇಲಾಖೆಯ ಮಹತ್ವದ ಅಪ್ಡೇಟ್ ಇಲ್ಲಿದೆ












Click it and Unblock the Notifications