ವಿಡಿಯೋ: ಮತ್ತೆ ಬಂದ್ರು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್
ಶ್ರೀನಗರ, ಮೇ 04: ಪಾಕಿಸ್ತಾನದ ಯುದ್ಧವಿಮಾನಗಳನ್ನು ಹಿಮ್ಮೆಟಿಸಿ ಪಾಕಿಸ್ತಾನದ ಸೇನೆಯ ವಶವಾಗಿ ಎರಡು ದಿನದ ನಂತರ ಭಾರತಕ್ಕೆ ವಾಪಸ್ಸಾಗಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರು ಬಹು ದಿನಗಳ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಸೈನ್ಯದ ತಮ್ಮ ಸಹೋದ್ಯೋಗಿಗಳೊಂದಿಗೆ ಕುಶಲೋಪರಿ ವಿಚಾರಿಸುತ್ತಿರುವ ಅಭಿನಂದನ್ ಅವರ ವಿಡಿಯೋ ಬಿಡುಗಡೆ ಆಗಿದೆ. ವಿಡಿಯೋದಲ್ಲಿ ಅಭಿನಂದನ್ ಅವರು ತಮ್ಮೆಲ್ಲ ಸಹೋದ್ಯೋಗಿಗಳೊಂದಿಗೆ ಸೆಲ್ಫಿ ತೆಗೆಸಿಕೊಳ್ಳುತ್ತಿದ್ದಾರೆ.
ಸೈನಿಕರನ್ನು ಉದ್ದೇಶಿಸಿ ಮಾತನಾಡಿರುವ ಅಭಿನಂದನ್, ನಾನೀಗ ನಿಮ್ಮೊಂದಿಗೆ ಚಿತ್ರ ತೆಗೆಸಿಕೊಂಡಿದ್ದು, ನಿಮ್ಮ ಕುಟುಂಬಗಳಿಗಾಗಿ, ಅವರ ಹಾರೈಕೆಯಿಂದ ನಾನು ಬೇಗನೆ ಹುಷಾರಾಗಲಿ ಎಂದು ಅವರು ಹಾರೈಸಿದ್ದಾರೆ ಹಾಗಾಗಿ ಅವರಿಗಾಗಿ ನಾನು ನಿಮ್ಮೊಂದಿಗೆ ಚಿತ್ರ ತೆಗೆಸಿಕೊಂಡಿದ್ದೇನೆ ಎಂದು ಅಭಿನಂದನ್ ಹೇಳಿದ್ದಾರೆ.

ಅಭಿನಂದನ್ ಅವರ ಜೊತೆ ಹಲವು ಸೈನಿಕರು ಚಿತ್ರಗಳನ್ನು ತೆಗೆಸಿಕೊಂಡ ಬಳಿಕ ಭಾರತ್ ಮಾತಾ ಕಿ ಜೈ ಘೋಷಣೆಗಳು ಮೊಳಗುತ್ತವೆ, ಆ ನಂತರ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಅಭಿನಂದನ್ ಅವರು ಹೊರಡುವ ದೃಶ್ಯ ವಿಡಿಯೋದಲ್ಲಿದೆ.
ಅಭಿನಂದನ್ ಅವರು ಪಾಕಿಸ್ತಾನದಿಂದ ಬಿಡುಗಡೆ ಆದ ಬಳಿಕ ಅವರ ಕುರಿತು ಹೆಚ್ಚಿನ ಮಾಹಿತಿಗಳು ಹೊರ ಜಗತ್ತಿಗೆ ಗೊತ್ತಾಗಿರಲಿಲ್ಲ, ಅವರು ಮತ್ತೆ ಯುದ್ಧ ವಿಮಾನ ಏರಲಿದ್ದಾರೆ ಎಂಬ ಮಾಹಿತಿಯಷ್ಟೆ ಹತ್ತು ದಿನದ ಹಿಂದೆ ಸಿಕ್ಕಿತ್ತು, ಅವರು ಈಗ ಸೈನ್ಯದ ನೆಲೆಯಲ್ಲಿ ಸಮವಸ್ತ್ರದಲ್ಲಿ ಕಾಣಿಸಿಕೊಂಡು ನೋಡಿದರೆ ಅವರು ಈಗಾಗಲೇ ಮರಳಿ ಉದ್ಯೋಗಕ್ಕೆ ಹಾಜರಾಗಿದ್ದಾರೆ ಎಂಬುದು ಗೊತ್ತಾಗುತ್ತಿದೆ.
#WATCH Viral video from Jammu & Kashmir: Wing Commander Abhinandan Varthaman interacting with his colleagues in Jammu and Kashmir. pic.twitter.com/rLwC4d1GUA
— ANI (@ANI) May 4, 2019
ಭಾರತದ ಮೇಲೆ ದಾಳಿಗೆ ಬಂದಿದ್ದ ಪಾಕಿಸ್ತಾನದ ಯುದ್ಧ ವಿಮಾನಗಳನ್ನು ಬೆನ್ನಟ್ಟಿ ಹೋಗಿದ್ದ ಅಭಿನಂದನ್ ಅವರ ವಿಮಾನವು ತಾಂತ್ರಿಕ ಕಾರಣಗಳಿಂದಾಗಿ ಪಾಕಿಸ್ತಾನದಲ್ಲಿ ಧರೆಗುರುಳಿತ್ತು, ಆಗ ಅಭಿನಂದನ್ ಅವರು ಪಾಕಿಸ್ತಾನದ ಸೈನ್ಯಕ್ಕೆ ಸೆರೆಸಿಕ್ಕಿದ್ದರು, ಅಲ್ಲಿ ಅವರು ಯಾವುದೇ ಮಾಹಿತಿಗಳನ್ನು ಬಿಟ್ಟುಕೊಡದೆ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದರು.
ಎರಡು ದಿನಗಳ ಬಳಿಕ ಇಮ್ರಾನ್ ಖಾನ್ ನೇತೃತ್ವದ ಪಾಕ್ ಸರ್ಕಾರವು ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿತ್ತು.
-
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
Bengaluru PG: ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ: ಪಿಜಿಗಳಲ್ಲಿ ಊಟ ಬಂದ್, ವೈರಲ್ ಪೋಸ್ಟ್ -
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications