ಪುಲ್ವಾಮಾ ದಾಳಿ ಬಳಿಕ, ಸೇನಾ ವಾಹನ ಸಂಚಾರ ಬಂದ್ ಮಾಡಿದ ಸರ್ಕಾರ
ಶ್ರೀನಗರ, ಫೆಬ್ರವರಿ 21: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಆತ್ಮಾಹುಳಿ ದಾಳಿಯ ಬಳಿಕ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಗುರುವಾರದಂದು ಪ್ರಕಟಿಸಿದೆ.
ಶ್ರೀನಗರ- ಅವಂತಿಪೋರ್ ಮಾರ್ಗದ ಹೆದ್ದಾರಿಯಲ್ಲಿ ಸೇನಾ ವಾಹನ ಸಂಚಾರ ಬಂದ್ ಮಾಡುವಂತೆ ಸೂಚಿಸಲಾಗಿದೆ. ಯೋಧರನ್ನು ಇನ್ಮುಂದೆ ವಿಮಾನ, ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಲು ಗೃಹ ಸಚಿವಾಲಯ ತೀರ್ಮಾನಿಸಿದೆ. ಕೇಂದ್ರ ಸಶಸ್ತ್ರ ಮೀಸಲು ಪಡೆ, ಪ್ಯಾರಾಮಿಲಿಟರಿ ದಳ ಸೇರಿದಂತೆ ಜಮ್ಮು -ಶ್ರೀನಗರ ವಲಯದ ಎಲ್ಲಾ ಮಿಲಿಟರಿ ಕ್ಯಾಂಪಿನವರಿಗೂ ಈ ಆದೇಶ ಅನ್ವಯವಾಗಲಿದೆ.
ಈ ಆದೇಶದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸುಮಾರು 7,80,000 ಸಿಎಪಿಎಫ್ ಸೇನಾ ಸಿಬ್ಬಂದಿಗಳಿಗೆ ನೆರವಾಗಲಿದೆ. ಕಾನ್ಸ್ ಟೇಬಲ್, ಹೆಡ್ ಕಾನ್ಸ್ ಟೇಬಲ್, ಎಎಸ್ ಐಗಳಿಗೆ ಈ ಮುಂಚೆ ಏರ್ ಲಿಫ್ಟ್ ಸೌಲಭ್ಯ ಸಿಗುತ್ತಿರಲಿಲ್ಲ. ಈಗ ಸೇವಾ ಅವಧಿ, ರಜಾ ವೇಳೆ ತೆರಳುವಾಗಲೂ ಸೇನಾ ವಿಮಾನ ಬಳಸಲು ಅನುಮತಿ ಸಿಕ್ಕಿದೆ.

ಈ ಹೊಸ ಸೌಲಭ್ಯದಿಂದ ಯೋಧರ ಪ್ರಯಾಣ ಸಮಯವೂ ಉಳಿಯುತ್ತದೆ ಹಾಗೂ ಸುರಕ್ಷಿತವಾಗಿಯೂ ಇರಬಹುದು ಎಂದು ಗೃಹ ಸಚಿವಾಲಯ ಹೇಳಿದೆ.
ಜಮ್ಮು ಮತ್ತು ಕಾಶ್ಮೀರ ವಲಯದಲ್ಲಿ ಏರ್ ಕೊರಿಯರ್ ಸೇವೆ ಸಿಎಪಿಎಫ್ ಸಿಬ್ಬಂದಿಗಳಿಗೆ ಲಭ್ಯವಾಗಿದೆ. ಶ್ರೀನಗರ-ಜಮ್ಮು ಸೆಕ್ಟರ್ ಅಲ್ಲದೆ ದೆಹಲಿ -ಜಮ್ಮು, ಜಮ್ಮು-ಶ್ರೀನಗರ, ಜಮ್ಮು-ದೆಹಲಿ ಸೆಕ್ಟರ್ ಗೂ ಏರ್ ಕೊರಿಯರ್ ಸೇವೆ ಜನವರಿ 2017ರಿಂದ ಲಭ್ಯವಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications