ಅಮರನಾಥ ಯಾತ್ರಿಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ

ಶ್ರೀನಗರ, ಏಪ್ರಿಲ್ 23 : ಈ ವರ್ಷದ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ. ಕೊರೊನಾ ಭೀತಿ ಹಿನ್ನಲೆಯಲ್ಲಿ ಯಾತ್ರೆ ರದ್ದುಗೊಳಿಸಲಾಗಿದೆ ಎಂಬ ಆದೇಶ ಪ್ರಕಟವಾಗಿತ್ತು.

ಹೊಸ ಪತ್ರಿಕಾ ಪ್ರಕಟಣೆ ಪ್ರಕಾರ ಜೂನ್ 23 ರಿಂದ ಆಗಸ್ಟ್ 3ರ ತನಕ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಇದೇ ಮೊದಲ ಬಾರಿಗೆ ಇಂತಹ ಆದೇಶ ಹೊರಡಿಸಲಾಗಿದೆ ಎಂದು ಭಕ್ತರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗಿದ್ದರೂ ಅಮರನಾಥ ಯಾತ್ರೆಯನ್ನು ರದ್ದು ಮಾಡಿರಲಿಲ್ಲ ಎಂದು ಭಕ್ತರು ಹೇಳುತ್ತಿದ್ದಾರೆ. ಲೆಫ್ಟಿನೆಂಟ್ ಗೌರ್ನರ್ ಜಿ. ಸಿ. ಮುರ್ಮು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯಾತ್ರೆ ಸ್ಥಗಿತಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ.

Amarnath Yatra From June 23 To August 3 Cancelled

ಅಮರನಾಥ ಯಾತ್ರೆ ರದ್ದುಗೊಂಡರೂ ಪ್ರಥಮ ಪೂಜೆ ಮತ್ತು ಸಂಪನ್ನ ಪೂಜೆಯನ್ನು ಸಂಪ್ರದಾಯದ ಪ್ರಕಾರವಾಗಿಯೇ ನಡೆಸಲಾಗುತ್ತದೆ ಎಂದು ಅಮರನಾಥ ಯಾತ್ರೆಯ ಮಂಡಳಿ ಸ್ಪಷ್ಟಪಡಿಸಿದೆ.

ಈ ವರ್ಷದ ಅಮರನಾಥ ಯಾತ್ರೆ ಜೂನ್ 23ರಂದು ಆರಂಭವಾಗಬೇಕಿತ್ತು. 42 ದಿನಗಳ ಯಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದರು. ಆದರೆ, ಈ ಬಾರಿ ಕೊರೊನಾ ಪರಿಣಾಮದಿಂದಾಗಿ ಮೊದಲ ಹಂತದ ಯಾತ್ರೆ ರದ್ದುಗೊಳ್ಳಲಿದೆ.

ಜಮ್ಮು ಮತ್ತು ಕಾಶ್ಮೀರದ ಒಂದು ಗುಹೆಯಲ್ಲಿ ಅಮರನಾಥ ದೇವಾಲಯವಿದೆ. ಗುಹೆಯೊಳಗೆ ಮಂಜಿನ ಗೆಡ್ಡೆ ಲಿಂಗದ ಆಕಾರವನ್ನು ಹೊಂದಲಿದ್ದು, ಇದನ್ನು ಶಿವನ ಪ್ರತಿರೂಪ ಎಂದು ಪೂಜಿಸಲಾಗುತ್ತದೆ. ಇದರ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಪ್ರತಿವರ್ಷ ದೇಶದ ವಿವಿಧ ರಾಜ್ಯಗಳಿಂದ ಆಗಮಿಸುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+