ಜಮ್ಮು-ಕಾಶ್ಮೀರದಲ್ಲಿ ಹೊಸ ಅಲೆ ಸೃಷ್ಟಿಸುತ್ತಾ ಈ ಹೊಸ ಪಕ್ಷ?
ಶ್ರೀನಗರ್, ಮಾರ್ಚ್.08: ಜಮ್ಮು-ಕಾಶ್ಮೀರ ರಾಜಕೀಯ ರಂಗದಲ್ಲಿ ಹೊಸ ಪಕ್ಷ ಉದಯಿಸಿದೆ. ಬಿಜೆಪಿ-ಕಾಂಗ್ರೆಸ್-ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫೆರೆನ್ಸ್ ಜೊತೆಗೆ 'ಆಪ್ನಿ ಪಾರ್ಟಿ' ಎಂಬ ಪಕ್ಷವನ್ನು ಭಾನುವಾರ ಮಾಜಿ ಸಚಿವ ಅಲ್ತಾಫ್ ಬುಖಾರಿ ಸ್ಥಾಪಿಸಿದ್ದಾರೆ.
ಕಳೆದ 2019ರ ಆಗಸ್ಟ್ ನಲ್ಲಿ ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ತೆರವುಗೊಳಿಸಿದ ನಂತರ ಸ್ಥಾಪನೆಯಾದ ಮೊದಲ ಪಕ್ಷವಾಗಿದೆ. ಪಿಡಿಪಿ, ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ನ 31 ಮುಖಂಡರು ಆಪ್ನಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.
ಹೊಸ ಜವಾಬ್ದಾರಿಗಳೊಂದಿಗೆ ನೂತನ ಪಕ್ಷವನ್ನು ಸ್ಥಾಪನೆ ಮಾಡಲಾಗಿದ್ದು, ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಪಕ್ಷವು ಕಾರ್ಯ ನಿರ್ವಹಿಸಲಿದೆ ಎಂದು ಆಪ್ನಿ ಪಾರ್ಟಿ ಮುಖ್ಯಸ್ಥ ಅಲ್ತಾಫ್ ಬುಖಾರಿ ತಿಳಿಸಿದರು.

ಸವಾಲುಗಳನ್ನು ಎದುರಿಸಲು ಸಿದ್ಧ ಎಂದ ಬುಖಾರಿ:
ಜಮ್ಮು-ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆದ ಬಳಿಕ ಸಾಕಷ್ಟು ಬದಲಾವಣೆಗಳಾಗಿವೆ. ರಾಜ್ಯದಲ್ಲಿನ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಕಾರ್ಖಾನೆಗಳು ಬಂದ್ ಆಗುವ ಸ್ಥಿತಿಗೆ ಬಂದು ತಲುಪಿವೆ. ಈ ಎಲ್ಲ ಸಮಸ್ಯೆಗಳನ್ನು ಎದುರಿಸಲು ಪ್ರಾಮಾಣಿಕ ಪ್ರಯತ್ನವನ್ನು ಆಪ್ನಿ ಪಕ್ಷವು ಮಾಡಲಿದೆ.
ಜನರಿಗೆ ಕನಸುಗಳನ್ನು ಮಾರಾಟ ಮಾಡುವುದಕ್ಕೆ ನಾವು ಬಂದಿಲ್ಲ. ಆದರೆ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡುವ ಉದ್ದೇಶವನ್ನು ಇಟ್ಟುಕೊಂಡು ಆಪ್ನಿ ಪಕ್ಷವನ್ನು ಸ್ಥಾಪಿಸಲಾಗಿದೆ ಎಂದು ಅಲ್ತಾಫ್ ಬುಖಾರಿ ತಿಳಿಸಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications