ಕಾಶ್ಮೀರದಲ್ಲಿ ಹಿಮಪಾತ: ಸೈನಿಕರು ಸೇರಿ 12 ಮಂದಿ ಸಾವು
ಶ್ರೀನಗರ, ಜನವರಿ 15: ಕಾಶ್ಮೀರದ ಕುಪ್ವಾರ ಮತ್ತು ಗಾಂಧರ್ಬಲ್ ಜಿಲ್ಲೆಗಳಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ಕನಿಷ್ಠ ಆರು ಮಂದಿ ಸೈನಿಕರು ಮತ್ತು ಆರು ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರದ ಐದು ಕಡೆ ಹಿಮಪಾತ ಸಂಭವಿಸಿರುವುದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕುಪ್ವಾರ ಜಿಲ್ಲೆಯ ಮಾಚಿಲ್ ಪ್ರದೇಶದ ಶಹಾಪುರದಲ್ಲಿನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಕಳೆದ 24 ಗಂಟೆಗಳಲ್ಲಿ ಮೂರು ಪ್ರತ್ಯೇಕ ಹಿಮಪಾತದ ಅವಘಡಗಳು ಸಂಭವಿಸಿದ್ದು, ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಯ ನೆಲೆಗಳು ತೊಂದರೆ ಅನುಭವಿಸಿವೆ ಎಂದು ಸೇನಾ ವಕ್ತಾರ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.
ಉತ್ತರ ಕಾಶ್ಮೀರದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಹಿಮಪಾತದಿಂದಾಗಿ ಐವರು ಸೈನಿಕರು ಹಿಮದ ಅಡಿ ಹೂತುಹೋಗಿದ್ದರು. ಅವರಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದರೆ, ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ.

ಕಾಶ್ಮೀರದ ವಾಯವ್ಯ ಭಾಗದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಹಿಮಪಾತಗಳಲ್ಲಿ ಅರೆಸೇನಾ ಪಡೆಯ ಯೋಧರೊಬ್ಬರು ಮಂಗಳವಾರ ಸಾವಿಗೀಡಾಗಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ವ್ಯಾಪಕವಾಗಿ ಬೀಳುತ್ತಿರುವ ಹಿಮದಿಂದಾಗಿ ನಾಗರಿಕರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದುವರೆಗೂ ಆರು ಮಂದಿ ಜೀವಗಳೆದುಕೊಂಡಿದ್ದಾರೆ.
ಸೋಮವಾರ ಪೂರ್ವ ಕಂಗನ್ ಪ್ರದೇಶದಲ್ಲಿ ಒಂಬತ್ತು ನಾಗರಿಕರು ಹಿಮಪಾತದಲ್ಲಿ ಸಿಲುಕಿದ್ದರು. ಆ ಗುಂಪಿನಿಂದ ನಾಲ್ವರನ್ನು ರಕ್ಷಿಸಲಾಯಿತು. ಬಳಿಕ ಹಿಮದ ಅಡಿಯಲ್ಲಿ ಸಿಲುಕಿದ್ದ ಐವರ ಮೃತದೇಹಗಳನ್ನು ಹೊರ ತೆಗೆಯಲಾಯಿತು ಎಂದು ಸ್ಥಳೀಯ ಅಧಿಕಾರಿ ಬಸೀರ್ ಖಾನ್ ತಿಳಿಸಿದ್ದಾರೆ.
ಬಂಡಿಪೊರಾ ಪ್ರದೇಶದಲ್ಲಿ ಮಂಗಳವಾರ ಮತ್ತೊಬ್ಬ ನಾಗರಿಕ ಇದೇ ರೀತಿಯ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಹಿಮಾಲಯ ಪ್ರದೇಶಗಳಲ್ಲಿ ವಿಪರೀತ ಹಿಮಪಾತವಾಗುತ್ತಿದೆ. ಹಿಮಪಾತ ಮತ್ತು ಭೂಕುಸಿತಗಳಿಂದ ಭಾರಿ ಹಾನಿಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ರಸ್ತೆಗಳು ಹಿಮದ ರಾಶಿಯ ಅಡಿಯಲ್ಲಿ ಮುಚ್ಚಿಹೋಗುತ್ತಿವೆ. ಇದರಿಂದ ಜನಜೀವನಕ್ಕೆ ತೀವ್ರ ಸಂಕಷ್ಟ ಉಂಟಾಗಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಹಿಮಪಾತಕ್ಕೆ 57 ಮಂದಿ ಬಲಿಯಾಗಿದ್ದಾರೆ.
2017ರಲ್ಲಿ ಕನಿಷ್ಠ 20 ಸೈನಿಕರು ಮೂರು ಹಿಮಪಾತದ ಪ್ರಕರಣಗಳಲ್ಲಿ ಬಲಿಯಾಗಿದ್ದರು. 2012ರಲ್ಲಿ ಪಾಕಿಸ್ತಾನದ 129 ಸೈನಿಕರು ಸೇರಿದಂತೆ ಪಾಕ್ ಆಕ್ರಮಿತ ಕಾಶ್ಮೀರಲ್ಲಿ 140 ಮಂದಿ ಮೃತಪಟ್ಟಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications