ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಪ್ವಾರದ ಸೇನಾ ಶಿಬಿರದ ಬಳಿ ಹಿಮಪಾತ: ಓರ್ವ ಯೋಧ ಹುತಾತ್ಮ

|
Google Oneindia Kannada News

ಶ್ರೀನಗರ, ನವೆಂಬರ್ 18: ಜಮ್ಮು-ಕಾಶ್ಮೀರದ ಕುಪ್ವಾರ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿರುವ ಸೇನಾ ಶಿಬಿರದ ಮೇಲೆ ಹಿಮಪಾತ ಉಂಟಾಗಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ನಂತರ, ಸೈನಿಕರಾದ ನಿಖಿಲ್ ಶರ್ಮಾ, ರಮೇಶ್ ಚಂದ್ ಮತ್ತು ಗುರುವಿಂದರ್ ಸಿಂಗ್ ಎಂದು ಗುರುತಿಸಲಾದ ಮೂವರನ್ನು ರಕ್ಷಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ವಿಡಿಯೋ: ಮೊದಲ ಹಿಮಪಾತ, ಕೇದಾರನಾಥ್, ಬದರಿನಾಥ ಬಂದ್ವಿಡಿಯೋ: ಮೊದಲ ಹಿಮಪಾತ, ಕೇದಾರನಾಥ್, ಬದರಿನಾಥ ಬಂದ್

ಮಂಗಳವಾರ ರಾತ್ರಿ 8 ಗಂಟೆಗೆ 'ರೋಶನ್' ಎಂಬ ಮುನ್ನೆಲೆ ಶಿಬಿರಕ್ಕೆ ಹಿಮಪಾತ ಅಪ್ಪಳಿಸಿದೆ. ಶಿಬಿರದಲ್ಲಿದ್ದ ಮೂವರು ಸೈನಿಕರು ಹಿಮಪಾತದಲ್ಲಿ ಹೂತುಹೋಗಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

 Avalanche Hits Army Post In Kupwara Soldier Killed

ಹಿಮಾಲಯದಲ್ಲಿ ಮೊದಲ ಹಿಮಪಾತದ ಅನುಭವವಾಗಿದೆ. ಚಳಿಗಾಲದ ಆರಂಭದೊಂದಿಗೆ ಉತ್ತರಾಖಂಡ್ ರಾಜ್ಯದಲ್ಲಿ ಭಾನುವಾರ, ಸೋಮವಾರದಂದು ಭಾರಿ ಹಿಮಪಾತ, ಹಿಮಮಳೆ ಸುರಿದಿದೆ.

ಚಾರ್ ಧಾಮ್ ಯಾತ್ರಾಸ್ಥಳಗಳಾದ ಕೇದಾರನಾಥ, ಬದ್ರಿನಾಥ, ಗಂಗೋತ್ರಿ, ಯಮುನೋತ್ರಿ, ಔಲಿ, ಹರ್ಸಿಲ್ ಮುಂತಾದೆಡೆ ಭಾನುವಾರ ಸಂಜೆ ಆರಂಭವಾದ ಭಾರಿ ಹಿಮಮಳೆ ಸೋಮವಾರವೂ ಮುಂದುವರೆದಿದೆ. ದಟ್ಟವಾದ ಹಿಮಚ್ಛಾದಿತ ಪ್ರದೇಶ ಎಲ್ಲೆಡೆ ಕಂಡು ಬಂದಿದೆ.

English summary
A soldier was killed and two others were injured as an avalanche hit an Army post in Kupwara district of Jammu and Kashmir, officials said on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X