ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಶ್ಮೀರದಲ್ಲಿ ಗುಂಡಿಕ್ಕಿ ಬ್ಯಾಂಕ್ ಮ್ಯಾನೇಜರ್‌ ಹತ್ಯೆ

|
Google Oneindia Kannada News

ಶ್ರೀನಗರ, ಜೂ. 2: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದ ಮತ್ತೊಂದು ಘಟನೆಯಲ್ಲಿ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಜೂನ್ 2 ಗುರುವಾರದಂದು ಕುಲ್ಗಾಮ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

ಕಾಶ್ಮೀರದಲ್ಲಿ ವಾಹನ ಸ್ಫೋಟ: ಮೂವರು ಯೋಧರಿಗೆ ಗಾಯಕಾಶ್ಮೀರದಲ್ಲಿ ವಾಹನ ಸ್ಫೋಟ: ಮೂವರು ಯೋಧರಿಗೆ ಗಾಯ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರೆ ಮೋಹನ್ ಪೋರಾದಲ್ಲಿರುವ ಎಲ್ಲಕ್ಷೈ ದೇಹತಿ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ವಿಜಯ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ರಾಜಸ್ಥಾನದ ಹನುಮಾನ್‌ಗಢ ಮೂಲದ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅದರೆ ಅವರು ಸಾವನ್ನಪ್ಪಿದರು. ಶೋಪಿಯಾನ್‌ನಿಂದ ಕೇವಲ 13 ಕಿಮೀ ದೂರದಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಾರ ಬೆಳಗ್ಗೆ ಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.

Bank manager shot dead in Kashmir

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶದಲ್ಲಿ ಹಿಂದೂ ಮಹಿಳೆಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ರಜನಿ ಬಾಲಾ ಎಂಬ ಶಾಲಾ ಶಿಕ್ಷಕಿಯನ್ನು ಕೊಲ್ಲಲಾಗಿತ್ತು. ಅವರು ತಮ್ಮ ಪತಿ ಮತ್ತು ಮಗಳೊಂದಿಗೆ ಜಮ್ಮು ವಿಭಾಗದ ಸಾಂಬಾದಲ್ಲಿ ವಾಸಿಸುತ್ತಿದ್ದರು. ವಿಜಯ್‌ ಕುಮಾರ್ ಹತ್ಯೆಯು ಕಾಶ್ಮೀರದಲ್ಲಿ ನಡೆದ ಉದ್ದೇಶಿತ ಹತ್ಯೆಗಳ ಸರಣಿಯಲ್ಲಿ ಇತ್ತೀಚಿನದು. ಕಳೆದ ವಾರ, ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಟಿವಿ ನಿರೂಪಕಿ ಅಮ್ರೀನ್ ಭಟ್ ಸಾವನ್ನಪ್ಪಿದ್ದರು. ಮೇ 12 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು.

Recommended Video

ಲಾರೆನ್ಸ್ ಬಿಶ್ನೋಯ್ ಗೆ ಹೆದರಿ ಪೊಲೀಸ್ ಮೊರೆ ಹೋದ ಸಲ್ಮಾನ್ ಖಾನ್ | OneIndia Kannada

(ಒನ್ಇಂಡಿಯಾ ಸುದ್ದಿ)

English summary
A Rajasthan-based bank manager was shot dead in Kulgam on Thursday, June 2, in another incident where Hindus were targeted in Jammu and Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X