ಕಾಶ್ಮೀರ ಬಿಟ್ಟು ತೊಲಗಿ, ಇಲ್ಲದಿದ್ದರೆ ಹೆಣವಾಗುವಿರಿ: ಕಾಶ್ಮೀರಿ ಪಂಡಿತರಿಗೆ ಲಶ್ಕರೆ ಇಸ್ಲಾಮ್ನಿಂದ ಬೆದರಿಕೆ
ಕಾಶ್ಮೀರ, ಮೇ 16: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಸರಕಾರಿ ಅಧಿಕಾರಿ ರಾಹುಲ್ ಭಟ್ ಅವರ ಕೊಲೆ ಖಂಡಿಸಿ ಕಾಶ್ಮೀರಿ ಪಂಡಿತರು ರಾಜ್ಯಾದ್ಯಂತ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಭಯೋತ್ಪಾದಕ ಸಂಘಟನೆ ಲಶ್ಕರೆ ಇಸ್ಲಾಮ್, 'ಕಾಶ್ಮೀರ ಬಿಟ್ಟು ತೊಲಗಿ, ಇಲ್ಲದಿದ್ದರೆ ಹೆಣವಾಗುವಿರಿ' ಎಂದು ಕಾಶ್ಮೀರಿ ಪಂಡಿತರಿಗೆ ಕೊಲೆ ಬೆದರಿಕೆ ಹಾಕುವ ಮೂಲಕ ದಾರ್ಷ್ಟ್ಯತೆ ತೋರಿದೆ.
ಜಮ್ಮು ಮತ್ತು ಕಾಶ್ಮೀರದ ಹವಾಲದ ನಿರಾಶ್ರಿತರ ಕಾಲೊನಿಯ ಅಧ್ಯಕ್ಷರಿಗೆ ಪತ್ರ ಬರೆದಿರುವ ಲಶ್ಕರೆ ಇಸ್ಲಾಮ್, 'ಕಾಶ್ಮೀರಿ ಪಂಡಿತರೇ ಪುಲ್ವಾಮಾ ಪ್ರದೇಶವನ್ನು ಬಿಟ್ಟು ಹೊರಡಿ. ಇಲ್ಲದಿದ್ದರೆ ಕೊಲೆಯಾಗುವಿರಿ' ಎಂದು ಬೆದರಿಸಿದೆ.
ಈ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪತ್ರಕ್ಕೆ ಲಶ್ಕರೆ ಇಸ್ಲಾಮ್ನ ಕಮಾಂಡರ್ ಸಹಿ ಹಾಕಿದ್ದಾನೆ. ಅಲ್ಲದೇ ಪತ್ರದಲ್ಲಿ, "ವಲಸಿಗರೆ ಮತ್ತು ಆರ್ ಎಸ್ಎಸ್ ಏಜೆಂಟರೆ ಕಾಶ್ಮೀರ ಬಿಟ್ಟು ತೊಲಗಿ. ಇಲ್ಲದಿದ್ದರೆ ಕೊಲೆಗೆ ಸಿದ್ಧರಾಗಿರಿ,' ಎಂದು ಹೆದರಿಸಿರುವ ಭಯೋತ್ಪಾದಕ ಸಂಘಟನೆ, ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

"ಎಲ್ಲ ವಲಸಿಗರೇ ಹಾಗೂ ಆರ್ ಎಸ್ಎಸ್ ಏಜೆಂಟರೆ ಜಮ್ಮು ಮತ್ತು ಕಾಶ್ಮೀರ ಬಿಟ್ಟು ಹೊರಡಿ, ಇಲ್ಲದಿದ್ದರೆ ಸಾಯಲು ಸಿದ್ಧರಾಗಿ. ಕಾಶ್ಮೀರಿ ಮುಸ್ಲಿಮರನ್ನು ಕೊಲ್ಲುವ ಮೂಲಕ ಕಾಶ್ಮೀರವನ್ನು ಮತ್ತೊಂದು ಇಸ್ರೇಲ್ ಮಾಡಲು ಬಿಡುವುದಿಲ್ಲ. ಕಾಶ್ಮೀರಿ ಪಂಡಿತರಿಗೆ ಇಲ್ಲಿ ಸ್ಥಳವಿಲ್ಲ. ನೀವು ನಿಮ್ಮ ಭದ್ರತೆಯನ್ನು ಎರಡು-ಮೂರು ಪಟ್ಟು ಹೆಚ್ಚಿಸಿಕೊಳ್ಳಿ. ಜತೆಗೆ ದಾಳಿಗೆ ಸಿದ್ಧವಾಗಿರಿ. ನೀವು ಸಾಯುವುದು ಶತಸಿದ್ಧ'' ಎಂದು ಬೆದರಿಕೆ ಹಾಕಿದೆ.
ಮೇ 12ರಂದು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿ, ಕಾಶ್ಮೀರಿ ಪಂಡಿತ ರಾಹುಲ್ ಭಟ್ ಅವರನ್ನು ಭಯೋತ್ಪಾದಕ ಸಂಘಟನೆ ಲಶ್ಕರೆ ತೊಯ್ಬಾ ಹತ್ಯೆ ಮಾಡಿತು. ಇದು ಕಾಶ್ಮೀರಿ ಪಂಡಿತರನ್ನು ಕೆರಳಿಸಿದ್ದು, ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗೆ ಕೇಂದ್ರ ಸರಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದರೆ ಬೆನ್ನಲ್ಲೇ ಕಾಶ್ಮೀರ ಪಂಡಿತರಿಗೆ ಭಯೋತ್ಪಾದಕ ಸಂಘಟನೆಯಿಂದ ಬೆದರಿಕೆ ಹಾಕಲಾಗಿದೆ.

ಇನ್ನೊಂದೆಡೆ, ರಾಹುಲ್ ಭಟ್ ಅವರನ್ನು ಹತ್ಯೆ ಮಾಡಿದ ಲಶ್ಕರೆ ತೊಯ್ಬಾ ಸಂಘಟನೆಯ ಮೂವರು ಭಯೋತ್ಪಾದಕರನ್ನು ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪಡೆಯು ಎನ್ಕೌಂಟರ್ ಮಾಡಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications