ಅಂಬೇಡ್ಕರ್ ಇದ್ದಿದ್ದರೆ ಅವರನ್ನೂ ಪಾಕ್ ಪರ ಎನ್ನುತ್ತಿತ್ತು ಬಿಜೆಪಿ: ಮುಫ್ತಿ
ಶ್ರೀನಗರ, ಜೂನ್ 14: 'ಒಂದೊಮ್ಮೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಈಗ ಇದ್ದಿದ್ದರೆ ಅವರನ್ನೂ ಕೂಡ ಬಿಜೆಪಿಯು ಪಾಕಿಸ್ತಾನದ ಪರ ಎಂದು ಹೇಳುತ್ತಿತ್ತು' ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಇದ್ದಿದ್ದರೆ ಅವರನ್ನೂ ಬಿಜೆಪಿ ಪಾಕ್ ಪರ ಎಂದು ಅಪಪ್ರಚಾರ ಮಾಡುತ್ತಿತ್ತು ಎಂದು ಪಿಡಿಪಿ ಮುಖ್ಯಸ್ಥೆ ಮೊಹಬೂಬಾ ಮುಫ್ತಿ ಆರೋಪಿಸಿದ್ದಾರೆ.
ಸಂವಿಧಾನದ 370ನೇ ವಿಧಿ ಮೂಲಕ ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಲಾಗಿತ್ತು. ಆದರೆ ಈ ವಿಶೇಷ ಅಧಿಕಾರವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಶಗೊಳಿಸಿದೆ. ಅಲ್ಲದೆ ಅಂಬೇಡ್ಕರ್ ಈಗ ಜೀವಂತವಾಗಿಲ್ಲ, ಇದ್ದಿದ್ದರೆ ಅವರನ್ನು ಪಾಕಿಸ್ತಾನ ಎಂದು ಬಿಜೆಪಿಗರು ದೂಷಿಸುತ್ತಿದ್ದರು ಎಂದು ಮುಫ್ತಿ ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ರದ್ದು ಮಾಡಿರುವ ಬಗ್ಗೆ ಮರುಚಿಂತನೆ ನಡೆಸಬಹುದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದು ಇದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.
2019ರಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.
''ದೇವರಿಗೆ ಧನ್ಯವಾದಗಳು, ಈಗ ಅಂಬೇಡ್ಕರ್ ಅವರು ಇಲ್ಲ, ಒಂದೊಮ್ಮೆ ಅವರು ಇದ್ದಿದ್ದರೆ ಅವರನ್ನೂ ಪಾಕಿಸ್ತಾನದ ಪರ ಎಂದು ಬಿಜೆಪಿ ಬಿಂಬಿಸುತ್ತಿತ್ತು' ಎಂದು ಮುಫ್ತಿ ಆರೋಪಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಜತೆಗೂ ಮೈತ್ರಿ ಮಾಡಿಕೊಂಡಿದ್ದ ಮೆಹಬೂಬಾ ಮುಫ್ತಿ, ಈಗ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಕ್ಲಬ್ ಹೌಸ್ ಆಡಿಯೋ ಸಂವಾದದಲ್ಲಿ ಪಾಕಿಸ್ತಾನದ ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರವಾಗಿ ದಿಗ್ವಿಜಯ್ ಸಿಂಗ್ ಜಮ್ಮು ಕಾಶ್ಮೀರದಲ್ಲಿಸಂವಿಧಾನದ ವಿಧಿ 370ನ್ನು ತೆಗೆದು ಹಾಕಿರುವ ನಿರ್ಧಾರ ಅತ್ಯಂತ ದುಃಖಕರವಾದದ್ದು, ಕಾಂಗ್ರೆಸ್ ಪಕ್ಷವು ಖಂಡಿತವಾಗಿಯೂ ಈ ವಿಷಯದ ಬಗ್ಗೆ ಮರು ಚಿಂತನೆ ಮಾಡುತ್ತಿದೆ ಎಂದು ಹೇಳಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications