ಜಮ್ಮುನಲ್ಲಿ ಓರ್ವ ಯೋಧ ಹುತಾತ್ಮ, ಉಗ್ರರ ದಾಳಿಯಲ್ಲಿ ಮಗುವಿನ ಸಾವು
ಶ್ರೀನಗರ, ಏಪ್ರಿಲ್ 01 : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಮನಕೋಟೆ ಮತ್ತು ಕೃಷ್ಣಾ ಘಾಟಿ ಎಂಬಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಭಾರತೀಯ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಅವರಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಗಡಿ ಭದ್ರತಾ ಪಡೆಯ ಇನ್ಸ್ಪೆಕ್ಟರ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಉಗ್ರರು ನಡೆಸಿದ ಅಪ್ರಚೋದಿತ ದಾಳಿಯಲ್ಲಿ 5 ವರ್ಷದ ಮಗು ಕೂಡ ಸಾವಿಗೀಡಾಗಿದೆ.
ಈ ಘಟನೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಉಗ್ರರು ಮತ್ತು ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸೇನೆಗೆ ನರೇಂದ್ರ ಮೋದಿಯವರು ಆದೇಶ ನೀಡಿ, ಎಲ್ಲ ಉಗ್ರರನ್ನು ಸವರಿ ಹಾಕಬೇಕೆಂದು ಆಗ್ರಹಿಸುತ್ತಿದ್ದಾರೆ. ಮೇಲಿಂದ ಮೇಲೆ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದು ಕೇಳಿಕೊಳ್ಳುತ್ತಿದ್ದಾರೆ.

ಉಗ್ರರ ಗುರುತು ಪತ್ತೆ : ಪುಲ್ವಾಮಾ ಜಿಲ್ಲೆಯ ಲಸ್ಸಿಪೋರಾದಲ್ಲಿ ಭಾರತೀಯ ಸೇನೆ ಸೋಮವಾರ ನಡೆಸಿದ ಗುಂಡಿನ ದಾಳಿಯಲ್ಲಿ ಲಷ್ಕರ್-ಇ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದಿನ್ ಸಂಘಟನೆಯ ನಾಲ್ವರು ಉಗ್ರರು ಹತರಾಗಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಹತರಾದವರನ್ನು ಶೋಪಿಯನ್ ನಿವಾಸಿ ಜಾಫರ್ ಪೌಲ್, ಪುಲ್ವಾಮಾ ನಿವಾಸಿ ತೌಸೀಫ್ ಅಹ್ಮದ್ ಯಟ್ಟೂ, ಹೆಲ್ಲೋ ಶೋಪಿಯನ್ ನಿವಾಸಿ ಆಕಿಬ್ ಅಹ್ಮದ್ ಕುಮಾರ್ ಮತ್ತು ಸೀಡೋ ಶೋಪಿಯನ್ ನಿವಾಸಿ ಮೊಹಮ್ಮದ್ ಶಫಿ ಭಟ್ ಎಂದು ಗುರುತಿಸಲಾಗಿದೆ.
Visuals from Poonch District Hospital: Total 5 security personnel got injured, of which 1 succumbed to his injuries, in ceasefire violation in Mankote & Krishna Ghati sectors of Poonch district, today. A 5-year-old girl has also died in the ceasefire violation. #JammuAndKashmir pic.twitter.com/hMC4RnmqGt
— ANI (@ANI) 1 April 2019
ಪಾಕಿಸ್ತಾನ ಶಾಂತಿಯ ಮಾತು ಆಡುತ್ತಿದ್ದರೂ, ಪಾಕಿಸ್ತಾನ ಬೆಂಬಲಿತ ಉಗ್ರರಿಂದ ಕದನ ವಿರಾಮ ಉಲ್ಲಂಘನೆ ಆಗುತ್ತಲೇ ಇದೆ. ಉಗ್ರ ಕೃತ್ಯ ನಡೆಸುತ್ತಿರುವವರಲ್ಲಿ ಹಲವರು ಸ್ಥಳೀಯರೇ ಆಗಿದ್ದು, ಅವರಿಗೆ ಹಲವಾರು ಉಗ್ರರ ತರಬೇತಿ ತಾಣಗಳಲ್ಲಿ ಇಂಜಿಯನ್ ಮುಜಾಹಿದ್ದಿನ್, ಜೈಷ್-ಇ-ಮೊಹಮ್ಮದ್ ಸಂಘಟನೆಗಳು ತರಬೇತಿ ನೀಡುತ್ತಿವೆ.
ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆಸಲಾಗಿದ್ದ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಜವಾನರು ಹುತಾತ್ಮರಾಗಿದ್ದರು. ಇದಾದ ಕೆಲ ದಿನಗಳಲ್ಲಿಯೇ ಫೆಬ್ರವರಿ 26ರಂದು ಭಾರತೀಯ ವಾಯು ಸೇನೆ ನಡೆಸಿದ್ದ ಪ್ರತಿದಾಳಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಲವಾರು ಉಗ್ರರ ನೆಲೆಗಳನ್ನು ಧ್ವಂಸ ಮಾಡಿಹಾಕಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications