ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಕೇಂದ್ರ ಮರ್ಮಾಘಾತ, ಜೆಕೆಎಲ್ಎಫ್ ಗೆ ನಿಷೇಧ
ಶ್ರೀನಗರ, ಮಾರ್ಚ್ 22: ಕಾಶ್ಮೀರ ಪ್ರತ್ಯೇಕತವಾದಿಗಳಿಗೆ ಕೇಂದ್ರ ಸರ್ಕಾರವು ಹೊಡೆತ ಮೇಲೆ ಹೊಡೆತಗಳನ್ನು ನೀಡುತ್ತಲೇ ಬರುತ್ತಿದೆ. ಕಾಶ್ಮೀರದ ಪ್ರಮುಖ ಪ್ರತ್ಯೇಕವಾದಿ ಸಂಘಟನೆ ಜೆಕೆಎಲ್ಎಫ್ಗೆ ಕೇಂದ್ರ ನಿಷೇಧ ಹೇರಿದೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಉಗ್ರರ ವಿರುದ್ಧ ಕಾಯ್ದೆಯ ಪ್ರಕಾರ ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಮೇಲೆ ನಿಷೇಧ ಹೇರಲಾಗಿದ್ದು, ಈ ಸಂಘಟನೆಯು ವಿದ್ರೋಹಕಾರಿ ಚಟುವಟಿಕೆಗಳಲ್ಲಿ ಭಾಗಿಯಾಗಿತ್ತು ಎಂದು ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಹೇಳಿದ್ದಾರೆ.
ಈ ಸಂಘಟನೆಯು ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡುತ್ತಿದೆ, ದೇಶವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂದು ನಿಷೇಧಕ್ಕೆ ಕಾರಣಗಳನ್ನು ನೀಡಲಾಗಿದೆ.

ಜೆಕೆಎಲ್ಎಫ್ ಸಂಘಟನೆಯ ಸಂಸ್ಥಾಪಕ ಯಾಸಿನ್ ಮಲ್ಲಿಕ್ ಆಗಿದ್ದು, ಆತ ಪ್ರಸ್ತುತ ಜೈಲಿನಲ್ಲಿದ್ದಾನೆ. ಆತನ ಆಸ್ತಿ-ಪಾಸ್ತಿಯನ್ನೂ ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ಆತನ ನಿವಾಸದ ತಪಾಸಣೆ ಸಹ ನಡೆದಿದೆ.
ಜೆಕೆಎಲ್ಎಫ್ ಮೇಲೆ 37 ಎಫ್ಐಆರ್ ಗಳು ದಾಖಲಾಗಿವೆ. ಅದರಲ್ಲಿ ಸೈನಿಕರನ್ನು ಕೊಂದಿರುವ ಪ್ರಕರಣವೂ ಇದೆ. ಜೊತೆಗೆ ಎನ್ಐಎ ಸಹ ಒಂದು ಕೇಸನ್ನು ಜೆಕೆಎಲ್ಎಫ್ ಮೇಲೆ ದಾಖಲಿಸಿದೆ.
ಇದೇ ತಿಂಗಳಲ್ಲಿ ನಿಷೇಧಕ್ಕೆ ಒಳಗಾಗುತ್ತಿರುವ ಕಾಶ್ಮೀರದ ಎರಡನೇ ಸಂಘಟನೆ ಇದಾಗಿದೆ. ಇದಕ್ಕೂ ಮುನ್ನಾ ಜಮಾತ್-ಎ-ಇಸ್ಲಾಮಿ ಸಂಘಟನೆ ಮೇಲೆ ನಿಷೇಧ ಹೇರಲಾಗಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications