ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ವರ್ಷದ ಅಮರಾಥ ಯಾತ್ರೆ ರದ್ದುಗೊಳಿಸಿ ಆದೇಶ

|
Google Oneindia Kannada News

ಶ್ರೀನಗರ, ಜುಲೈ 21: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ವರ್ಷದ ಅಮರನಾಥ ಯಾತ್ರೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಮರನಾಥ ಯಾತ್ರೆ ನಡೆಸಿದರೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ ಅವರಿಂದ ಸೋಂಕು ಹೆಚ್ಚಳವಾಗಲಿದೆ ಎಂದು ಭಾವಿಸಲಾಗಿದೆ.

ರಾಮ ಮಂದಿರ ನಿರ್ಮಿಸಿದರೆ ಕೊವಿಡ್-19 ಹೋಗಲಾಡಿಸಲು ಸಾಧ್ಯವೆ?ರಾಮ ಮಂದಿರ ನಿರ್ಮಿಸಿದರೆ ಕೊವಿಡ್-19 ಹೋಗಲಾಡಿಸಲು ಸಾಧ್ಯವೆ?

ಈ ಹಿನ್ನೆಲೆಯಲ್ಲಿ 2020 ರ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಿ ಮಂಡಳಿ ಆದೇಶ ಹೊರಡಿಸಿದೆ. ಯಾತ್ರೆ ರದ್ದತಿಯನ್ನು ಘೋಷಿಸಲು ಮಂಡಳಿ ವಿಷಾದ ವ್ಯಕ್ತಪಡಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ರಾಜಭವನ ಹೇಳಿದೆ.

Coronavirus Crisis Amarnath Yatra Cancelled This Year

ಜುಲೈ 21 ರಂದು ಅಮರನಾಥ ಯಾತ್ರೆ ಆರಂಭವಾಗಲಿದೆ ಎಂದು ಕಳೆದ ತಿಂಗಳು ಹೇಳಲಾಗಿತ್ತು. ಅಲ್ಲದೆ ಈ ಬಾರಿ ಕೇವಲ ಹದಿನೈದು ದಿನ ಮಾತ್ರ ಯಾತ್ರೆ ನಡೆಯಲಿದೆ ಎನ್ನಲಾಗಿತ್ತು, ಆದರೆ ಇದೀಗ ಯಾತ್ರೆ ರದ್ದಾಗಿದ್ದು ಭಕ್ತರು ಮನದಲ್ಲೇ ಅಮರನಾಥನನ್ನು ಸ್ಮರಿಸಬೇಕಾಗಿದೆ.

ಧಾರ್ಮಿಕ ಭಾವನೆಗಳ ಘಾಸಿಯಾಗದಂತೆ ಮಂಡಳಿ ಬೆಳಿಗ್ಗೆ ಮತ್ತು ಸಂಜೆ ಆರತಿಯ ನೇರ ಪ್ರಸಾರ / ವರ್ಚುವಲ್ ದರ್ಶನವನ್ನು ಮುಂದುವರಿಸಲಿದೆ ಎಂದು ಅದು ಹೇಳಿದೆ.

ಈ ಹಿಂದೆ ನಡೆಸಿದ್ದಂತೆಯೇ ಸಾಂಪ್ರದಾಯಿಕ ಆಚರಣೆಗಳನ್ನು ಕೈಗೊಳ್ಳಲಾಗುತ್ತದೆ. ಖಾದಿ ಮುಬಾರಕ್ ಅವರಿಗೆ ಸರ್ಕಾರದಿಂದ ಅನುಕೂಲವಾಗಲಿದೆ ಎಂದು ರಾಜಭವನ ಹೇಳಿದೆ.

English summary
The iconic Amarnath Yatra, the annual Hindu pilgrimage to a Jammu and Kashmir shrine, will not take place this year because of the coronavirus pandemic, the board that manages the place of worship informed today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X