ಈ ವರ್ಷದ ಅಮರಾಥ ಯಾತ್ರೆ ರದ್ದುಗೊಳಿಸಿ ಆದೇಶ
ಶ್ರೀನಗರ, ಜುಲೈ 21: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ವರ್ಷದ ಅಮರನಾಥ ಯಾತ್ರೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
ಅಮರನಾಥ ಯಾತ್ರೆ ನಡೆಸಿದರೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ ಅವರಿಂದ ಸೋಂಕು ಹೆಚ್ಚಳವಾಗಲಿದೆ ಎಂದು ಭಾವಿಸಲಾಗಿದೆ.
ರಾಮ ಮಂದಿರ ನಿರ್ಮಿಸಿದರೆ ಕೊವಿಡ್-19 ಹೋಗಲಾಡಿಸಲು ಸಾಧ್ಯವೆ?
ಈ ಹಿನ್ನೆಲೆಯಲ್ಲಿ 2020 ರ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಿ ಮಂಡಳಿ ಆದೇಶ ಹೊರಡಿಸಿದೆ. ಯಾತ್ರೆ ರದ್ದತಿಯನ್ನು ಘೋಷಿಸಲು ಮಂಡಳಿ ವಿಷಾದ ವ್ಯಕ್ತಪಡಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ರಾಜಭವನ ಹೇಳಿದೆ.
ಜುಲೈ 21 ರಂದು ಅಮರನಾಥ ಯಾತ್ರೆ ಆರಂಭವಾಗಲಿದೆ ಎಂದು ಕಳೆದ ತಿಂಗಳು ಹೇಳಲಾಗಿತ್ತು. ಅಲ್ಲದೆ ಈ ಬಾರಿ ಕೇವಲ ಹದಿನೈದು ದಿನ ಮಾತ್ರ ಯಾತ್ರೆ ನಡೆಯಲಿದೆ ಎನ್ನಲಾಗಿತ್ತು, ಆದರೆ ಇದೀಗ ಯಾತ್ರೆ ರದ್ದಾಗಿದ್ದು ಭಕ್ತರು ಮನದಲ್ಲೇ ಅಮರನಾಥನನ್ನು ಸ್ಮರಿಸಬೇಕಾಗಿದೆ.
ಧಾರ್ಮಿಕ ಭಾವನೆಗಳ ಘಾಸಿಯಾಗದಂತೆ ಮಂಡಳಿ ಬೆಳಿಗ್ಗೆ ಮತ್ತು ಸಂಜೆ ಆರತಿಯ ನೇರ ಪ್ರಸಾರ / ವರ್ಚುವಲ್ ದರ್ಶನವನ್ನು ಮುಂದುವರಿಸಲಿದೆ ಎಂದು ಅದು ಹೇಳಿದೆ.
ಈ ಹಿಂದೆ ನಡೆಸಿದ್ದಂತೆಯೇ ಸಾಂಪ್ರದಾಯಿಕ ಆಚರಣೆಗಳನ್ನು ಕೈಗೊಳ್ಳಲಾಗುತ್ತದೆ. ಖಾದಿ ಮುಬಾರಕ್ ಅವರಿಗೆ ಸರ್ಕಾರದಿಂದ ಅನುಕೂಲವಾಗಲಿದೆ ಎಂದು ರಾಜಭವನ ಹೇಳಿದೆ.