ಕೊರೊನಾ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದಿದ್ದ ಅಖಿಲೇಶ್ಗೆ ಓಮರ್ ಅಬ್ದುಲ್ಲಾ ತಿರುಗೇಟು
ಶ್ರೀನಗರ, ಜನವರಿ 03: ಕೊರೊನಾ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದಿದ್ದ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ.
ಹೆಚ್ಚು ಮಂದಿ ಕೊರೊನಾ ಲಸಿಕೆ ಪಡೆದಂತೆಲ್ಲಾ, ದೇಶಕ್ಕೆ ಹಾಗೂ ಆರ್ಥಿಕತೆಗೆ ಒಳ್ಳೆಯದು ಎಂದೂ ಓಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ಅಖಿಲೇಶ್ ಯಾದವ್ ಹೇಳಿಕೆ ಬಗ್ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಸಹ ಪ್ರತಿಕ್ರಿಯೆ ನೀಡಿದ್ದು, ಕೊರೊನಾ ಲಸಿಕೆ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಬರೆದಿರುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ, "ಬೇರೆಯವರ ಬಗ್ಗೆ ನನಗೆ ತಿಳಿದಿಲ್ಲ, ಆದರೆ ನನ್ನ ಸರದಿ ಬಂದಾಗ ನಾನು ಸಂತೋಷದಿಂದ ಕೋವಿಡ್-19 ಲಸಿಕೆ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.
ಲಸಿಕೆಗಳು ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ, ಅವು ಮಾನವಿಯತೆಗೆ ಸೇರಿದ್ದು ಹಾಗೂ ಅತ್ಯಂತ ದುರ್ಬಲವಾಗಿರುವವರಿಗೆ ಲಸಿಕೆ ಬೇಗ ಸಿಕ್ಕಿದಷ್ಟೂ ಒಳ್ಳೆಯದು" ಎಂದು ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.
ಕೊರೊನಾ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದಿದ್ದ ಅಖಿಲೇಶ್ ಯಾದವ್, ಬಿಜೆಪಿ ಲಸಿಕೆಯನ್ನು ಹೇಗೆ ನಂಬಲಿ ಎಂದು ಕೇಳಿದ್ದರು.
ಅಖಿಲೇಶ್ ಯಾದವ್ ಅವರ ಈ ಹೇಳಿಕೆಗೆ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಆಕ್ಸ್ ಫರ್ಡ್ - ಅಸ್ಟ್ರಾಜೆನಿಕಾ ಕಂಪೆನಿಯ ಕೋವಿಶೀಲ್ಡ್ ಲಸಿಕೆ ಬಳಸುವಂತೆ ಕೇಂದ್ರ ಸರಕಾರ ರಚಿಸಿದ್ದ ವಿಶೇಷ ತಜ್ಞರ ಸಮಿತಿ ಶಿಫಾರಸನ್ನು ಮಾಡಿತ್ತು.
ರೂಪಾಂತರಿ ಕೊರೊನೊ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಡ್ರೈರನ್ ನಡೆಸಲು ಅನುಮತಿ ನೀಡಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications