ಶೋಪಿಯಾನ್ನಲ್ಲಿ ಭದ್ರತಾ ಪಡೆ ಉಗ್ರರ ನಡುವೆ ಗುಂಡಿನ ಚಕಮಕಿ:ಓರ್ವ ಉಗ್ರ ಹತ
ಶ್ರೀನಗರ, ಏಪ್ರಿಲ್ 17: ಶೋಪಿಯಾನ್ನಲ್ಲಿ ನಡೆದ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಶೋಪಿಯಾನ್ ಜಿಲ್ಲೆಯ ಡೈರೂ ಎಂಬಲ್ಲಿ ಗುಂಡಿನ ಚಕಮಕಿ ನಡೆದಿದ್ದು ಕಾರ್ಯಾಚರಣೆ ನಡೆಯುತ್ತಿದೆ ಎಂದು ಇತ್ತೀಚಿನ ಮಾಹಿತಿಯಿಂದ ತಿಳಿದುಬಂದಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧರು 44 ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಪಡೆಯ ಸಹಾಯದೊಂದಿಗೆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ಭಯೋತ್ಪಾದಕರು ಗುಂಡಿನ ಮಳೆ ಗೈಯಲು ಆರಂಭಿಸಿದರು. ಈ ಹಂತದಲ್ಲಿ ಗುಂಡಿನ ಚಕಮಕಿ ನಡೆದು ಓರ್ವ ಉಗ್ರ ಹತನಾಗಿದ್ದಾನೆ.

ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಆರಂಭವಾದ ಗುಂಡಿನ ಚಕಮಕಿಯಲ್ಲಿ ಶುಕ್ರವಾರ ಮುಂದುವರಿದು ನಸುಕಿನ ಜಾವ ಓರ್ವ ಉಗ್ರ ಹತನಾಗಿದ್ದಾನೆ.












Click it and Unblock the Notifications