ಜಮ್ಮು ಕಾಶ್ಮೀರದಲ್ಲಿ ಎನ್ಕೌಂಟರ್, ಮೂವರು ಉಗ್ರರ ಹತ್ಯೆ
ಶ್ರೀನಗರ, ಅಕ್ಟೋಬರ್ 16: ಜಮ್ಮು ಕಾಶ್ಮೀರದ ಅನಂತ್ನಾಗ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರ ಉಗ್ರರನ್ನು ಸದೆಬಡಿಯಲಾಗಿದೆ.
ಎನ್ಕೌಂಟರ್ನಲ್ಲಿ ಯೋಧರೊಬ್ಬರಿಗೆ ಗಾಯವಾಗಿದೆ. ಪಜಲ್ಪುರದಲ್ಲಿ ಉಗ್ರರು ಅಡಿಗಿರುವ ಮಾಹಿತಿ ಪಡೆದಿದ್ದ ಯೋಧರು ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸಂದರ್ಭದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಗಾಯಗೊಂಡಿದ್ದ ಯೋಧರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎನ್ನುವ ಮಾಹಿತಿ ಲಭ್ಯವಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಜಮ್ಮು ಕಾಶ್ಮೀರದಲ್ಲಿ ಹಿಂಪಡೆದ ವಿಶೇಷ ಸ್ಥಾನಮಾನವನ್ನು ವಾಪಸ್ ನೀಡುವಂತೆ ಪ್ರತಿಭಟನೆ ನಡೆಯುತ್ತಿದೆ. ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಸೋದರಿ ಹಾಗೂ ಮಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

2 ದಿನಗಳ ಬಳಿಕ ಇಂಟರ್ನೆಟ್ ಸೇವೆ ಆರಂಭವಾದ ನಂತರ ಮಹಿಳೆಯರೆಲ್ಲ ಸೇರಿ ಶಾಂತಿಯುತ ಪ್ರತಿಭಟನೆ ನಡೆಸಿದ್ದರು.ಕೇಂದ್ರವು ಭಾರಿ ಭದ್ರತಾ ನಿರ್ಬಂಧಗಳನ್ನು ವಿಧಿಸಿತ್ತು ಮತ್ತು ರಾಜಕಾರಣಿಗಳನ್ನು ಬಂಧಿಸುವುದು, ಪ್ರವಾಸಿಗರನ್ನು ಸ್ಥಳಾಂತರಿಸುವುದು, ಹೆಚ್ಚುವರಿ ಸೈನಿಕರನ್ನು ನಿಯೋಜಿಸುವುದು ಹಾಗೂ ಫೋನ್ ಮತ್ತು ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸುವುದು ಸೇರಿದಂತೆ ಕ್ರಮಗಳನ್ನು ತೆಗೆದುಕೊಂಡಿತ್ತು.












Click it and Unblock the Notifications