ಕುಪ್ವಾರದಲ್ಲಿ ಎನ್ಕೌಂಟರ್; ಮೂವರು ಲಷ್ಕರ್ ಉಗ್ರರ ಹತ್ಯೆ
ಶ್ರೀನಗರ, ಮೇ 26: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಗ್ರಾಮದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಬೆಳಗ್ಗೆ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ.
ಘಟನಾ ಸ್ಥಳದಿಂದ ಪೊಲೀಸರು ಶಸ್ತ್ರಾಸ್ತ್ರಗಳು ಹಾಗೂ ಸ್ಟೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದರು.
ಉಗ್ರರ ಜೊತೆ ನಂಟು; ಮೂವರು ಸರಕಾರಿ ನೌಕರರು ಸೇವೆಯಿಂದ ವಜಾ
"ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೋಯ್ಬಾಗೆ ಸೇರಿದ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ. ಅವರ ವೈಯಕ್ತಿಕ ಗುರುತು ಇನ್ನೂ ಪತ್ತೆಯಾಗಿಲ್ಲ. ಉಗ್ರರಿಂದ ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು ಸೇರಿದಂತೆ ಸ್ಫೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
ಜುಮಗುಂಡ್ ಗ್ರಾಮದಲ್ಲಿ ಉಗ್ರರ ಒಳನುಸಳುವಿಕೆ ಪ್ರಯತ್ನಗಳ ಬಗ್ಗೆ ಕುಪ್ವಾರ್ ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಗುರುವಾರ ಮುಂಜಾನೆ ಕಾರ್ಯಾಚರಣೆ ಪ್ರಾರಂಭವಾಯಿತು.
ಗೋರಖನಾಥ ದೇಗುಲದ ಮೇಲೆ ದಾಳಿ ಆರೋಪಿಗೆ ಐಸಿಸ್ ಉಗ್ರರ ನಂಟು: ಯುಪಿ ಪೊಲೀಸ್ ಅಧಿಕಾರಿ
ಬುಧವಾರ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್ಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು.
"ಜೈಷ್-ಎ-ಮೊಹಮ್ಮಸ್ಗೆ ಸೇರಿದ ಪಾಕಿಸ್ತಾನದ ಮೂವರು ಉಗ್ರರು ಬಾರಾಮುಲ್ಲ ಪ್ರದೇಶದಲ್ಲಿ ಕಳೆದ 3-4 ತಿಂಗಳಿನಿಂದ ಸಕ್ರಿಯವಾಗಿ ಇರುವ ಬಗ್ಗೆ ನಮಗೆ ಮಾಹಿತಿ ಲಭ್ಯವಿತ್ತು. ಅವರ ಮೇಲೆ ನಿಗಾ ಇಡಲಾಗಿತ್ತು. ಬುಧವಾರ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಒಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ವರ್ಷ ಇದುವರೆಗೆ 22 ಮಂದಿ ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ'' ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.