ಕಾಂಗ್ರೆಸ್ ಗುಪ್ಕರ್ ಮೈತ್ರಿಕೂಟದ ಭಾಗ, ಜತೆಯಾಗಿ ಚುನಾವಣೆ ಎದುರಿಸುತ್ತೇವೆ: ಫಾರೂಕ್
ಶ್ರೀನಗರ, ನವೆಂಬರ್ 9: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನವನ್ನು ಮರಳಿ ತರುವ ಹೋರಾಟಕ್ಕಾಗಿ ಎಲ್ಲ ಮುಖ್ಯವಾಹಿನಿ ಪಕ್ಷಗಳು ಸೇರಿ ಮಾಡಿಕೊಂಡಿರುವ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲೇರೇಷನ್ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಕೂಡ ಭಾಗವಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಗುಪ್ಕರ್ ಘೋಷಣೆಯ ಮೈತ್ರಿಕೂಟದಲ್ಲಿ ಜಮ್ಮು ಮತ್ತು ಕಾಶ್ಮೀರದ ಇತರೆ ಪಕ್ಷಗಳ ಜತೆಗೆ ಕಾಂಗ್ರೆಸ್ ಸಹ ಸೇರಿಕೊಂಡಿದೆ. ಈ ಸಮೂಹದ ಭಾಗವಾಗಿ ಜಿಲ್ಲಾ ಮಟ್ಟದ ಚುನಾವಣೆಗಳಲ್ಲಿ ಜತೆಯಾಗಿ ಸ್ಪರ್ಧಿಸಲಾಗುವುದು ಎಂದು ಈ ಮೈತ್ರಿಕೂಟದ ಮುಖ್ಯಸ್ಥರೂ ಆಗಿರುವ ಫಾರೂಕ್ ತಿಳಿಸಿದ್ದಾರೆ.
'ಅವರು ಯಾವಾಗ ಪ್ರತ್ಯೇಕವಾಗಿದ್ದು? ಇದರಲ್ಲಿ ತಪ್ಪು ಕಲ್ಪನೆ ಇರಬಾರದು. ಕಾಂಗ್ರೆಸ್ ಮೈತ್ರಿಕೂಟದ ಭಾಗವಾಗಿದೆ ಮತ್ತು ನಾವು ಜತೆಯಾಗಿ ಡಿಡಿಸಿ (ಜಿಲ್ಲಾ ಅಭಿವೃದ್ಧಿ ಸಮಿತಿ) ಚುನಾವಣೆಗಳಲ್ಲಿ ಹೋರಾಡಲಿದ್ದೇವೆ' ಎಂದು ಅವರು ಹೇಳಿದ್ದಾರೆ.

ನವೆಂಬರ್ 28ರಿಂದ ಡಿಸೆಂಬರ್ 22ರವರೆಗೆ ನಡೆಯಲಿರುವ ಡಿಡಿಸಿ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನದೇ ಅಭ್ಯರ್ಥಿಗಳನ್ನು ಕಣಕ್ಕಿಳಿಯಲಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಫಾರೂಕ್, 'ನೀವು ಇದನ್ನು ಕೇಳಿಸಿಕೊಂಡಿದ್ದು ಯಾವಾಗ? ನಿನ್ನೆಯೇ ಬೇರೆ. ಇಂದು ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ಜಿ.ಎ. ಮಿರ್ ನನ್ನನ್ನು ಭೇಟಿ ಮಾಡಲು ಬಂದಿದ್ದರು. ನಾವು ಜತೆಯಾಗಿ ಚುನಾವಣೆ ಎದುರಿಸೋಣ ಎಂದು ಹೇಳಿದ್ದಾರೆ' ಎಂದು ತಿಳಿಸಿದ್ದಾರೆ.
'ಅವರೆಲ್ಲರೂ ಈ ಬಾರಿ ಜತೆಯಾಗಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್ ಹಾಗೂ ಇತರರು ಸೇರಿದ್ದಾರೆ. ಪರಿಸ್ಥಿತಿಯ ಕಾರಣದಿಂದ ಅವರೆಲ್ಲರೂ ಜತೆಯಾಗಿದ್ದಾರೆ ಮತ್ತು ಸಾರ್ವಜನಿಕವಾಗಿ ಜತೆಯಾಗಿರುವಂತೆ ಕಾಣಿಸಿಕೊಳ್ಳುತ್ತಿದ್ದಾರೆ' ಎಂದು ಕಾಂಗ್ರೆಸ್ ಮುಖಂಡ ಸೈಫುದ್ದೀನ್ ಸೋಝ್ ಈ ಮೈತ್ರಿಕೂಟಕ್ಕೆ ಸೇರಿಕೊಂಡಿರುವ ಮಾಹಿತಿ ನೀಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications