8 ತಿಂಗಳ ಬಂಧನದ ಅನುಭವದಲ್ಲಿ ಒಮರ್ ಅಬ್ದುಲ್ಲಾ ಹೇಳಿದ್ದೇನು?
ಶ್ರೀನಗರ್, ಮಾರ್ಚ್ 27: ಎಂಟು ತಿಂಗಳು ಬಂಧನದಲ್ಲಿ ಇದ್ದ ಅನುಭವದ ಮೇಲೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಬುಧವಾರ ಟ್ವಿಟರ್ ನಲ್ಲಿ ನೀಡಿದ ಲಾಕ್ ಡೌನ್ ಸಮಯದ ಸಲಹೆ ಇಂಟರೆಸ್ಟಿಂಗ್ ಆಗಿದೆ. ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ನಿತ್ಯವೂ ಹೇಗಿರಬೇಕು ಎಂಬುದನ್ನು ಅಭ್ಯಾಸ ಮಾಡಿಕೊಂಡು, ಅದನ್ನೇ ಅನಸರಿಸಬೇಕು ಎಂಬ ಸಲಹೆ ಮಾಡಿದ್ದಾರೆ.
ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿಯೂ ಆದ ಅವರು, ದೈನಂದಿನ ಚಟುವಟಿಕೆ ಒಂದೇ ರೀತಿಯಲ್ಲಿ ಇರುವಂತೆ ಅಭ್ಯಾಸ ಮಾಡಿ, ಆ ನಂತರ ಅದನ್ನೇ ಮಾಡುತ್ತಾ ಇರಲು ಪ್ರಯತ್ನಿಸಿ ಎಂದಿದ್ದಾರೆ. ಹಲವು ತಿಂಗಳಿಂದ ನಾನು ಹರಿ ನಿವಾಸ್ ಸಬ್ ಜೈಲ್ ನಲ್ಲಿ ಇದ್ದೆ. ಒಂದೇ ರೀತಿಯ ಅಭ್ಯಾಸಕ್ಕೆ ಬದ್ಧನಾಗಿದ್ದೆ. ಈ ಅಭ್ಯಾಸದಿಂದ ನನಗೆ ಗುರಿ ಸಿಕ್ಕಂತೆ ಆಯಿತು ಎಂದು ಟ್ವೀಟ್ ಮಾಡಿದ್ದಾರೆ.
ಐವತ್ತು ವರ್ಷದ ಅಬ್ದುಲ್ಲಾ ಕೆಲವು ವ್ಯಾಯಾಮಗಳ ಬಗ್ಗೆಯೂ ಹೇಳಿಕೊಂಡಿದ್ದಾರೆ. "ವ್ಯಾಯಾಮ, ವ್ಯಾಯಾಮ, ವ್ಯಾಯಾಮ. ಈ ಅಂಶವನ್ನು ಇದಕ್ಕಿಂತ ಹೆಚ್ಚು ಹೇಳಲಾರೆ. ಹರಿನಿವಾಸ್ ಸಬ್ ಜೈಲ್ ನಲ್ಲಿ ಮೈದಾನಕ್ಕೆ ಹೋಗುವುದಕ್ಕೆ ಅವಕಾಶ ಇತ್ತು. ಅಲ್ಲಿ ಜಾಗವೂ ಇತ್ತು. ಆ ವಿಷಯದಲ್ಲಿ ನಾನು ಅದೃಷ್ಟವಂತ. ವಾತಾವರಣ ಸರಿಯಿಲ್ಲ ಅಂದಾಗ ಒಳಗಡೆಯೇ ವ್ಯಾಯಾಮ ಮಾಡುತ್ತಿದ್ದೆ. ಕಾರಿಡಾರ್ ನಲ್ಲಿ ಓಡಾಡುತ್ತಿದ್ದೆ. ಮೆಟ್ಟಿಲು ಹತ್ತಿಳಿಯುತ್ತಿದ್ದೆ" ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ ನಲ್ಲಿ ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಮೇಲೆ, ಒಮರ್ ಅಬ್ದುಲ್ಲಾ ಅವರನ್ನು ಬಂಧನದಲ್ಲಿ ಇಡಲಾಗಿತ್ತು. ಹೊರ ಜಗತ್ತಿನ ಸಂಪರ್ಕವೇ ಇಲ್ಲದೆ ಎಂಟು ತಿಂಗಳು ಇದ್ದ ಅವರು, ಈಚೆಗೆ ಬಿಡುಗಡೆ ಆಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications