ಫಾರೂಕ್ ಅಬ್ದುಲ್ಲಾರನ್ನು ಭೇಟಿ ಮಾಡಿದ ಗುಲಾಂ ನಬಿ ಆಜಾದ್
ಶ್ರೀನಗರ, ಮಾರ್ಚ್ 14: ಸಾಕಷ್ಟು ತಿಂಗಳುಗಳಿಂದ ಜೈಲಿನಲ್ಲಿದ್ದು ಬಿಡುಗಡೆಯಾಗಿ ಬಂದಿರುವ ನ್ಯಾಷನಲ್ ಕಾನ್ಫೆರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಇಂದು ಭೇಟಿ ಮಾಡಿದರು.
ಅದಕ್ಕೂ ಮುನ್ನ ಫಾರೂಕ್ ಅಬ್ದುಲ್ಲಾ ತಮ್ಮ ಮಗ ಓಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿದ್ದರು. ಫಾರೂಕ್ ಅಬ್ದುಲ್ಲಾ ಅವರನ್ನು ಶುಕ್ರವಾರವಷ್ಟೇ ಬಿಡುಗಡೆ ಮಾಡಲಾಗಿತ್ತು. ಅವರನ್ನು ಏಳು ತಿಂಗಳುಗಳ ಕಾಲ ಗೃಹ ಬಂಧನದಲ್ಲಿಡಲಾಗಿತ್ತು.
ಸಾರ್ವಜನಿಕ ರಕ್ಷಣಾ ಕಾಯ್ದೆ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಅರ್ಟಿಕಲ್ 370 ರದ್ದತಿ ಬಳಿಕ ಶ್ರೀನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸುವ ನಿಟ್ಟಿನಲ್ಲಿ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿರಿಸಲಾಗಿತ್ತು.

ಆರ್ಟಿಕಲ್ 370 ಅಂದರೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಸಮಯದಲ್ಲಿ ಕಾಶ್ಮೀರದಲ್ಲಿ ಕೆಲವು ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿಡಲಾಗಿತ್ತು.
ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲಾ ಅವರ ಗೃಹ ಬಂಧನ ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸ್ವಾಗತಿಸಿದೆ. ಜೆಕೆಪಿಸಿಸಿ ಮುಖ್ಯ ವಕ್ತಾರ ರವೀಂದ್ರ ಶರ್ಮಾ ಈ ಕುರಿತು ಪ್ರತಿಕ್ರಿಯಿಸಿ, ಸರ್ಕಾರದ ನಿರ್ಧಾರ ತಡವಾದರೂ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.
ಅಲ್ಲದೆ ಇನ್ನುಳಿದ ಮುಖಂಡರನ್ನೂ ವಿಳಂಬನೀತಿ ಅನುಸರಿಸದೆ ಗೃಹಬಂಧನದಿಂದ ಮುಕ್ತಗೊಳಿಸುವಂತೆ ಅವರು ಆಗ್ರಹಿಸಿದ್ದರೆ. ಮುಖ್ಯವಾಹಿನಿಯ ಮುಖಂಡರ ಗೃಹಬಂಧನವು ಪ್ರಜಾಪ್ರಭುತ್ವ ಪದ್ಧತಿಯ ಸ್ಫೂರ್ತಿಗೆ ವಿರುದ್ಧವಾದುದು ಎಂದು ವಾದಿಸಿತ್ತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications