ಜಮ್ಮು ವಿಧಾನಸಭೆ ವಿಸರ್ಜನೆ: ಪಿಡಿಪಿ, ಕಾಂಗ್ರೆಸ್, ಎನ್ಸಿಗೆ ಮುಖಭಂಗ
ಶ್ರೀನಗರ, ನವೆಂಬರ್ 21: ಬಿಜೆಪಿ ಬೆಂಬಲ ಹಿಂದಕ್ಕೆ ಪಡೆದುಕೊಂಡು ಸರ್ಕಾರ ಪತನಗೊಂಡ ಹಲವು ತಿಂಗಳ ಬಳಿಕ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿದ್ದ ಜಮ್ಮು ಮತ್ತು ಕಾಶ್ಮೀರದ ಪಿಡಿಪಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳಿಗೆ ತೀವ್ರ ಮುಖಭಂಗ ಉಂಟಾಗಿದೆ.
ಮಹಾಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿದ್ದ ಪಕ್ಷಗಳಿಗೆ ಅಧಿಕಾರಕ್ಕೆ ಬರುವ ಆಸೆ ನುಚ್ಚು ನೂರಾಗಿದೆ.
ಮೂರೂ ಪಕ್ಷಗಳು ಸರ್ಕಾರ ರಚನೆಯ ಕಸರತ್ತು ನಡೆಸುವ ವೇಳೆಯೇ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರು ವಿಧಾನಸಭೆಯನ್ನು ವಿಸರ್ಜನೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದರಿಂದ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದ ಪಿಡಿಪಿಯ ಆಸೆಗೆ ತಣ್ಣೀರೆರಚಿದಂತಾಗಿದೆ. ಬುಧವಾರ ನಡೆದ ನಾಟಕೀಯ ಬೆಳವಣಿಗೆಗಳು ಕುತೂಹಲ ಮೂಡಿಸಿದ್ದವು.
ಆದರೆ, ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಬೆಂಬಲದ ನೆರವಿನೊಂದಿಗೆ ಸರ್ಕಾರ ರಚಿಸುವುದಾಗಿ ಹಕ್ಕು ಮಂಡಿಸಲು ಮುಂದಾಗುವುದಾಗಿ ಪತ್ರ ಬಹಿರಂಗಪಡಿಸಿದ ಕೆಲವೇ ಸಮಯದಲ್ಲಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ವಿಧಾನಸಭೆ ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.
Have been trying to send this letter to Rajbhavan. Strangely the fax is not received. Tried to contact HE Governor on phone. Not available. Hope you see it @jandkgovernor pic.twitter.com/wpsMx6HTa8
— Mehbooba Mufti (@MehboobaMufti) 21 November 2018
ರಾಜಭವನದಿಂದ ಅಧಿಕೃತ ಆದೇಶ ಹೊರಬರುವ ಕೆಲವೇ ನಿಮಿಷಗಳ ಮೊದಲು ರಾಜ್ಯದಲ್ಲಿ ಸರ್ಕಾರ ರಚಿಸುವ ಸಲುವಾಗಿ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಕೋರುವುದಾಗಿ ಮೆಹಬೂಬಾ ಮುಫ್ತಿ ಪತ್ರವನ್ನು ಟ್ವೀಟ್ ಮಾಡಿದ್ದರು.
89 ಸೀಟುಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 44 ಸೀಟುಗಳ ಅಗತ್ಯವಿದೆ. ಮೂರೂ ಪಕ್ಷಗಳಿಂದ ಒಟ್ಟು 56 ಸೀಟುಗಳು ಲಭ್ಯವಾಗಲಿದೆ. ಇದರಿಂದ ಸರ್ಕಾರ ರಚಿಸಬಹುದು ಎಂದು ಮುಫ್ತಿ ಬಯಸಿದ್ದರು. ಪಿಡಿಪಿ 28 ಸೀಟುಗಳನ್ನು ಹೊಂದಿದ್ದರೆ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಕ್ರಮವಾಗಿ 15 ಮತ್ತು 12 ಸೀಟುಗಳ ಬಲ ಹೊಂದಿವೆ.
Jammu and Kashmir Governor Satya Pal Malik has passed an order dissolving the state Legislative Assembly. pic.twitter.com/TirFfZfTCs
— ANI (@ANI) 21 November 2018
ಇದಕ್ಕೂ ಮುನ್ನ ಪೀಪಲ್ಸ್ ಕಾನ್ಫರೆನ್ಸ್ ಪಕ್ಷದ ಸಜ್ಜದ್ ಲೋನ್, ಬಿಜೆಪಿ ಮತ್ತು ಇತರೆ 18 ಚುನಾಯಿತ ಸದಸ್ಯರ ಬೆಂಬಲದಿಂದ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿದ್ದರು. ಬಿಜೆಪಿ 25 ಶಾಸಕರನ್ನು ಹೊಂದಿದ್ದರೆ, ಪೀಪಲ್ಸ್ ಕಾನ್ಫರೆನ್ಸ್ ಇಬ್ಬರು ಶಾಸಕರನ್ನು ಹೊಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications