ಪ್ರತ್ಯೇಕತಾವಾದಿ ನಾಯಕರ ಭದ್ರತೆಗೆ ಕೋಟಿ ಕೋಟಿ ಖರ್ಚು
Recommended Video

ಶ್ರೀನಗರ, ಫೆಬ್ರವರಿ 18 : ಜಮ್ಮು ಮತ್ತು ಕಾಶ್ಮೀರದ ಐವರು ಪ್ರತ್ಯೇಕತಾವಾದಿ ನಾಯಕರಿಗೆ ನೀಡಲಾಗಿದ್ದ ಭದ್ರತೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಹುರಿಯತ್ ಮುಖಂಡರಾದ ಮೀರ್ವೈಜ್ ಉಮರ್ ಫಾರೂಕ್, ಪ್ರೊ. ಅಬ್ದುಲ್ ಗನಿ ಭಟ್, ಬಿಲಾಲ್ ಲೋನ್, ಜೆಕೆಎಲ್ಎಫ್ ನಾಯಕ ಹಾಶಿಮ್ ಖುರೇಷಿ ಮತ್ತು ಶಬೀರ್ ಶಾ ಅವರಿಗೆ ನೀಡಲಾಗಿದ್ದ ಭದ್ರತಾ ಸಿಬ್ಬಂದಿ ಮತ್ತು ವಾಹನಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯಲಾಗಿದೆ.
ಸರ್ಕಾರದ ಮಾಹಿತಿಗಳ ಪ್ರಕಾರ ಪ್ರತ್ಯೇಕತಾವಾದಿ ನಾಯಕರಿಗೆ ನೀಡಲಾಗಿದ್ದ ಭದ್ರತೆಗಾಗಿ ಸರ್ಕಾರ 10.88 ಕೋಟಿ ರೂ.ಗಳನ್ನು ಖರ್ಚು ಮಾಡಿತ್ತು. ನಾಯಕರಿಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವೇತನಕ್ಕಾಗಿ ಸರ್ಕಾರ ಇಷ್ಟೊಂದು ವೆಚ್ಚ ಮಾಡುತ್ತಿತ್ತು.

49.7 ಲಕ್ಷ ರೂ.ಗಳನ್ನು ನಾಯಕರಿಗೆ ನೀಡುತ್ತಿದ್ದ ಭದ್ರತೆಯ ವಾಹನಗಳ ಇಂಧನ, ಎಸ್ಕಾರ್ಟ್ ವಾಹನಳ ಇಂಧನಕ್ಕಾಗಿ ಖರ್ಚು ಮಾಡಲಾಗುತ್ತಿತ್ತು. 2017-18ನೇ ಸಾಲಿನಲ್ಲಿ 19.51 ಲಕ್ಷ ರೂ.ಗಳನ್ನು ಮೀರ್ವೈಜ್ ಉಮರ್ ಫಾರೂಕ್ಗೆ ಭದ್ರತೆ ನೀಡುತ್ತಿದ್ದ ಸಿಬ್ಬಂದಿ ವೇತನಕ್ಕಾಗಿ ವೆಚ್ಚ ಮಾಡಲಾಗಿದೆ.
2008-09ರಲ್ಲಿ 1.27 ಕೋಟಿ ವೇತನಕ್ಕಾಗಿ ವೆಚ್ಚ ಮಾಡಲಾಗಿದೆ. 5.06 ಕೋಟಿ ರೂ.ಗಳನ್ನು ಕಳೆದ 10 ವರ್ಷಗಳಲ್ಲಿ ಖರ್ಚು ಮಾಡಲಾಗಿದೆ. ಹುರಿಯತ್ ಮುಖಂಡರಾದ ಮೀರ್ವೈಜ್ ಉಮರ್ ಫಾರೂಕ್ ಮಾಧ್ಯಮ ಕಾರ್ಯದರ್ಶಿ ಎನ್ಐಎನಿಂದ ಬಂಧನವಾಗುವ ತನಕ ಆತನಿಗೂ ಸರ್ಕಾರ ಭದ್ರತೆಯನ್ನು ನೀಡಿದೆ.
ಹುರಿಯತ್ ಮುಖಂಡರಾದ ಮೀರ್ವೈಜ್ ಉಮರ್ ಫಾರೂಕ್ಗಾಗಿಯೇ ಸರ್ಕಾರ ಹೆಚ್ಚು ವೆಚ್ಚ ಮಾಡಿದೆ. ಶ್ರೀನಗರದಲ್ಲಿರುವ ಮೀರ್ವೈಜ್ ನಿವಾಸಕ್ಕೆ 10 ಪೊಲೀಸರು ಸದಾ ಕಾವಲಿನಲ್ಲಿ ಇರುತ್ತಿದ್ದರು. ಇತನ ಮಾಧ್ಯಮ ಸಲಹೆಗಾರ 2017ರಲ್ಲಿ ಬಂಧನವಾದ ಬಳಿಕ ಆತನಿಗೆ ನೀಡುತ್ತಿದ್ದ ಭದ್ರತೆ ವಾಪಸ್ ಪಡೆಯಲಾಗಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications