ಸತ್ಯ ಹೇಳುವ ಏಕೈಕ ರಾಜಕಾರಣಿ ರಾಹುಲ್ ಗಾಂಧಿ; ಮುಫ್ತಿ
ಶ್ರೀನಗರ, ಜನವರಿ 16: ದೇಶದ ಸರ್ವಾಧಿಕಾರಿ ಆಡಳಿತದ ವಿರುದ್ಧವಾಗಿ ನಿಂತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಇತಿಹಾಸ ಮುಂದೆ ನೆನಪಿಸಿಕೊಳ್ಳುತ್ತದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೊಗಳಿದ್ದಾರೆ.
"ಭಾರತವು ಕೆಲವು ಬಂಡವಾಳಶಾಹಿಗಳ ಬಿಗಿ ಮುಷ್ಠಿಯಲ್ಲಿದೆ. ಇಂಥ ಸಂದರ್ಭದಲ್ಲಿ ಸತ್ಯವನ್ನು ನುಡಿದು ಧೈರ್ಯವಾಗಿ ನಿಂತಿರುವ ಏಕೈಕ ರಾಜಕಾರಣಿ ಎಂದರೆ ಅದು ರಾಹುಲ್ ಗಾಂಧಿ" ಎಂದು ಮುಫ್ತಿ ಟ್ವೀಟ್ ಮಾಡಿ ಶ್ಲಾಘಿಸಿದ್ದಾರೆ. "ರಾಹುಲ್ ಗಾಂಧಿಯವರನ್ನು ಅಣಕವಾಡುವುದಷ್ಟೇ ನಿಮಗೆಲ್ಲಾ ಗೊತ್ತಿರುವುದು. ಆದರೆ ಸತ್ಯವನ್ನು ನೇರವಾಗಿ ಹೇಳುವಷ್ಟು ಧೈರ್ಯವಿರುವ ಏಕೈಕ ರಾಜಕಾರಣಿ ರಾಹುಲ್ ಗಾಂಧಿ. ಈ ಕಾರಣಕ್ಕೇ ಇತಿಹಾಸ ಇವರನ್ನು ಮುಂದೆ ನೆನಪಿಸಿಕೊಳ್ಳಲಿದೆ" ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್ ಅನ್ನೂ ಮಾಡಿರುವ ಅವರು, ಅದರಲ್ಲಿ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳ ಕುರಿತು ಮಾತನಾಡಿದ್ದಾರೆ. "ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತ ಸಂಘಟನೆಗಳ ವಿರುದ್ಧ ಕೇಂದ್ರ ಸರ್ಕಾರ ಮಸಲತ್ತು ನಡೆಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು ಬಳಸಿಕೊಂಡು ತನ್ನಿಷ್ಟದಂತೆ ಆಟವಾಡುತ್ತಿದೆ" ಎಂದು ಆರೋಪಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications