ಕೊರೊನಾದಿಂದ ನನ್ನ ಹೆಂಡತಿಗೆ ಮುತ್ತು ಕೊಡಲೂ ಆಗಿಲ್ಲ; ಫಾರೂಖ್ ಅಬ್ದುಲ್ಲಾ
ಶ್ರೀನಗರ, ಜನವರಿ 18: "ಕೊರೊನಾ ವೈರಸ್ ಏನೆಲ್ಲಾ ಮಾಡಿದೆ, ಈ ಸೋಂಕಿನಿಂದಾಗಿ ನನ್ನ ಹೆಂಡತಿಗೆ ಮುತ್ತು ಕೊಡಲೂ ಸಾಧ್ಯವಾಗಿಲ್ಲ" ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುರ್ಜರ್ ದೇಶ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಸೂದ್ ಅಹ್ಮದ್ ಚೌಧರಿ ಅವರ ಜೀವನಚರಿತ್ರೆಯ ಪುಸ್ತಕವನ್ನು ಭಾನುವಾರ ಫಾರೂಖ್ ಅಬ್ದುಲ್ಲಾ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭ ಮೂವತ್ತೈದು ನಿಮಿಷಗಳ ಕಾಲ ಭಾಷಣ ಮಾಡಿದ ಅವರು, ಕೊರೊನಾ ವೈರಸ್ ಪರಿಣಾಮಗಳ ಕುರಿತೂ ಮಾತನಾಡುತ್ತಾ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಈ ಹೇಳಿಕೆ ನೀಡಿ ಕಾರ್ಯಕ್ರಮದಲ್ಲಿ ಸೇರಿದ್ದ ಜನರನ್ನು ನಗಿಸಿದ್ದಾರೆ. ಮುಂದೆ ಓದಿ...

"ಅಪ್ಪಿಕೊಳ್ಳಲೂ ಭಯಪಡುವಂತೆ ಮಾಡಿದೆ"
"ಕೊರೊನಾ ಸೋಂಕಿನಿಂದಾಗಿ ಹಸ್ತಲಾಘನ ಮಾಡಲು ಹಾಗೂ ಅಪ್ಪಿಕೊಳ್ಳಲೂ ಭಯಪಡುವಂತೆ ಆಗಿಬಿಟ್ಟಿದೆ. ಏನೇ ಮಾಡಬೇಕಾದರೂ ಮೂರು ಬಾರಿ ಯೋಚಿಸುವಂತೆ ಆಗಿದೆ. ಕೊರೊನಾ ಎಲ್ಲವನ್ನೂ ಬದಲಿಸಿದೆ. ಯಾರಿಗೆ ಗೊತ್ತು, ಯಾವಾಗ ಎಲ್ಲಿ ಯಾರಿಗೆ ಏನಾಗುತ್ತದೆ ಎಂದು" ಎಂದಿದ್ದಾರೆ.

"ಹೆಂಡತಿಗೆ ಮುತ್ತು ಕೊಡಲೂ ಸಾಧ್ಯವಾಗಿಲ್ಲ"
"ಕೊರೊನಾ ಸೋಂಕಿನ ಕುರಿತು ಅನುಭವಗಳನ್ನು ಹಂಚಿಕೊಳ್ಳುವ ಸಂದರ್ಭ "ಕೊರೊನಾ ಭಯದಿಂದಾಗಿ ನನ್ನ ಹೆಂಡತಗೆ ಮುತ್ತು ಕೊಡಲೂ ಸಾಧ್ಯವಾಗಿಲ್ಲ. ನನ್ನ ಹೃದಯ ಬಯಸಿದರೂ ಅಪ್ಪಿಕೊಳ್ಳುವ ಮಾತೇ ಇಲ್ಲ" ಎಂದೂ ಹೇಳಿದ್ದಾರೆ.

ವೈರಲ್ ಆದ ಫಾರೂಖ್ ಹೇಳಿಕೆ
ತಾನು ಕಾರ್ಯಕ್ರಮವೊಂದರಲ್ಲಿ ಮಾಸ್ಕ್ ಧರಿಸದ ಫೋಟೊ ಕಂಡು ಮನೆಗೆ ಬಂದಾಕ್ಷಣ ನನ್ನ ಮಗಳು ನನ್ನನ್ನು ತರಾಟೆಗೆ ತೆಗೆದುಕೊಂಡಳು. ಆದ್ದರಿಂದ ಈಗ ಹುಷಾರಾಗಿದ್ದೇನೆ ಎಂದು ಹೇಳಿದ್ದಾರೆ. ಫಾರೂಖ್ ಅಬ್ದುಲ್ಲಾ ಅವರು ಹೇಳಿಕೆ ನೀಡಿರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊರೊನಾ ಲಸಿಕೆ ಬಗ್ಗೆ ಹಾರೈಕೆ
ಈಗ ದೇಶದಲ್ಲಿ ಕೊರೊನಾ ಲಸಿಕೆಗಳು ಅಭಿವೃದ್ಧಿಗೊಂಡಿವೆ. ಲಸಿಕಾ ಅಭಿಯಾನವೂ ನಡೆಯುತ್ತಿದೆ. ಈ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಕೇಳಿಕೊಳ್ಳುತ್ತೇನೆ. ಆಗಲಾದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications