ಗೃಹಬಂಧನದಿಂದ ಮುಕ್ತಿ; ಮಾಜಿ ಸಿಎಂ ಫಾರೂಕ್ ಅಬ್ದುಲ್ ಹೇಳಿದ್ದೇನು?
ಶ್ರೀನಗರ್, ಮಾರ್ಚ್.13: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾರನ್ನು ವಿರುದ್ಧ ಕೇಂದ್ರ ಸರ್ಕಾರವು ಹೇರಿದ್ದ ಸಾರ್ವಜನಿಕ ಸುರಕ್ಷಿತಾ ಕಾಯ್ದೆಯನ್ನು ತೆರವುಗೊಳಿಸಲಾಗಿದೆ.
ಕಳೆದ ಏಳು ತಿಂಗಳಿನಿಂದ ಗೃಹ ಬಂಧನದಲ್ಲಿದ್ದ ಫಾರೂಕ್ ಅಬ್ದುಲ್ಲಾ ಶುಕ್ರವಾರ ಅದರಿಂದ ಹೊರ ಬಂದಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನಗೆ ಮಾತುಗಳೇ ಹೊರಡುತ್ತಿಲ್ಲ. ನಾನೀನ ಆರಾಮವಾಗಿದ್ದೇನೆ ಎಂದರು.
ಗೃಹಬಂಧನದಿಂದ ಹೊರ ಬಂದಿರುವ ನಾನು ದೆಹಲಿಗೆ ತೆರಳಲು ಶಕ್ತನಾಗಿದ್ದೇನೆ. ಸಂಸತ್ ಅಧಿವೇಶನದಲ್ಲಿ ಭಾಗಿಯಾಗಲಿದ್ದು, ಸಾರ್ವಜನಿಕರ ಪರವಾಗಿ ಕಲಾಪದಲ್ಲಿ ಧ್ವನಿ ಎತ್ತುತ್ತೇನೆ ಎಂದು ಫಾರೂಕ್ ಅಬ್ದುಲ್ಲಾ ತಿಳಿಸಿದರು.

ಗೃಹ ಬಂಧನದಲ್ಲಿಟ್ಟ ನಾಯಕರ ಬಿಡುಗಡೆ ಬಗ್ಗೆ ಮಾತು
ಸಾರ್ವಜನಿಕ ಸುರಕ್ಷತಾ ಕಾಯ್ದೆ 1978ರ ಸೆಕ್ಷನ್ 19(1)ರ ಅಡಿಯಲ್ಲಿ ಗೃಹ ಬಂಧನದಲ್ಲಿ ಇಟ್ಟಿರುವ ಎಲ್ಲ ನಾಯಕರನ್ನು ಬಿಡುಗಡೆ ಮಾಡಬೇಕು. ಆಗ ಮಾತ್ರ ನಮ್ಮ ಸ್ವಾತಂತ್ರ್ಯದ ಹೋರಾಟಕ್ಕೆ ಒಂದು ಅರ್ಥ ಸಿಗುತ್ತದೆ. ನಮ್ಮ ಹೋರಾಟದ ಉದ್ದೇಶ ಪೂರ್ಣಗೊಳ್ಳುತ್ತದೆ ಎಂದರು.

ನಾಯಕರ ಬಿಡುಗಡೆವರೆಗೂ ರಾಜಕಾರಣದ ಮಾತಾಡಲ್ಲ
ಗೃಹ ಬಂಧನದಲ್ಲಿ ಇರಿಸಿರುವ ಎಲ್ಲ ನಾಯಕರನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಬೇಕು. ಅಲ್ಲಿಯವರೆಗೂ ನಾನು ರಾಜಕಾರಣದ ಬಗ್ಗೆ ಯಾವುದೇ ಮಾತುಗಳನ್ನು ಆಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.

ಫಾರೂಕ್ ಅಬ್ದುಲ್ಲಾ ಗೃಹಬಂಧನವನ್ನು ತೆರವುಗೊಳಿಸಿ ಆದೇಶ
ಕಳೆದ ಸೆಪ್ಪೆಂಬರ್.17ರಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಗೃಹಬಂಧನದಲ್ಲಿ ಇರಿಸಲಾಗಿತ್ತು. ಡಿಸೆಂಬರ್.13ರಂದು ನಾಯಕರ ಗೃಹಬಂಧನದ ಅವಧಿಯನ್ನು ವಿಸ್ತರಿಸಲಾಗಿತ್ತು. ಶುಕ್ರವಾರ ತತ್ ಕ್ಷಣವೇ ಗೃಹಬಂಧನದಿಂದ ಮುಕ್ತಗೊಳಿಸುವಂತೆ ಆದೇಶಿಲಾಗಿದೆ ಎಂದು ಜಮ್ಮು-ಕಾಶ್ಮೀರದ ಗೃಹ ಕಾರ್ಯದರ್ಶಿ ಶಾಲಿನ್ ಕಬ್ರಾ ತಿಳಿಸಿದ್ದಾರೆ. ಇನ್ನು, ಕೇಂದ್ರ ಸರ್ಕಾರದ ಆದೇಶವನ್ನು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕರು ಸ್ವಾಗತಿಸಿದ್ದಾರೆ.

ಗೃಹ ಬಂಧನದಲ್ಲೇ ಉಳಿದವರ ಬಿಡುಗಡೆ ಯಾವಾಗ?
ಫಾರೂಕ್ ಅಬ್ದುಲ್ಲಾರ ಬಿಡುಗಡೆಗೆ ಪುತ್ರಿ ಸಾಫಿಯಾ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಬಿಡುಗಡೆ ಆಗುವುದು ಯಾವಾಗ ಎಂದು ಪಕ್ಷದ ಕಾರ್ಯಕರ್ತರು ಪ್ರಶ್ನೆ ಮಾಡುತ್ತಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುತ್ತಿದ್ದಂತೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಉಪಾಧ್ಯಕ್ಷ ಉಮರ್ ಅಬ್ದುಲ್ಲಾ, ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿರನ್ನು ಕೇಂದ್ರ ಸರ್ಕಾರವು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹ ಬಂಧನದಲ್ಲಿ ಇರಿಸಲಾಗಿತ್ತು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications