ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐವರು ಭಾರತೀಯ ಯೋಧರನ್ನು ಕೊಂದೆ ಎಂದ ಪಾಕ್, ಭಾರತದಿಂದ ಛೀಮಾರಿ

|
Google Oneindia Kannada News

ಶ್ರೀನಗರ, ಆಗಸ್ಟ್ 16: ಗಡಿ ನಿಯಂತ್ರಣ ರೇಖೆ ಬಳಿ ಐವರು ಭಾರತೀಯ ಯೋಧರನ್ನು ಕೊಂದಿದ್ದೇವೆ ಎಂದು ಪಾಕ್ ಸೇನಾ ವಕ್ತಾರ ನೀಡಿದ ಹೇಳಿಕೆಯನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.

"ಭಾರತೀಯ ಸೇನೆ ಗಡಿನಿಯಂತ್ರಣ ರೇಖೆ ಬಳಿ ಗುಂಡಿನ ದಾಳಿ ಆರಂಭಿಸಿತ್ತು. ಜಮ್ಮು ಮತ್ತು ಕಾಶ್ಮೀರದ ವಿಷಯದಿಂದ ನಮ್ಮ ಗಮನವನ್ನು ಬೇರೆಡೆಗೆ ತಿರುಗಿಸಲು ಭಾರತ ಈ ಪ್ರಯತ್ನ ನಡೆಸಿತ್ತು. ಆದರೆ ಈ ದಾಳಿಯಲ್ಲಿ ಐವರು ಭಾರತೀಯ ಯೋಧರನ್ನು ಕೊಲ್ಲುವಲ್ಲಿ ಪಾಕ್ ಸೇನೆ ಯಶಸ್ವಿಯಾಗಿದೆ" ಎಂದು ಪಾಕಿಸ್ತಾನಿ ಸೇನಾ ವಕ್ತಾರ ಮೇ.ಜ. ಆಸಿಫ್ ಘಾಫೂರ್ ಟ್ವೀಟ್ ಮಾಡಿದ್ದರು.

ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ಬೆದರಿಕೆ ಒಡ್ಡಿದ ಇಮ್ರಾನ್ ಖಾನ್ !ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ಬೆದರಿಕೆ ಒಡ್ಡಿದ ಇಮ್ರಾನ್ ಖಾನ್ !

"ಈ ದಾಳಿಯಲ್ಲಿ ಹಲವು ಬಂಕರ್ಸ್ ಗಳನ್ನು ನಾಶಪಡಿಸಲಾಗಿದೆ, ಗುಂಡಿನ ದಾಳಿ ಈಗಲೂ ಮುಂದಿವರಿದಿದೆ" ಎಂದು ಅವರು ಹೇಳಿದ್ದರು.

India Rejects Pakistans Claim Of Killing 5 Indian Soldiers

ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಭಾರತೀಯ ಸೇನಾ ವಕ್ತಾರ ಕರ್ನಲ್ ಅಮಾನ್ ಆನಂದ್, "ಪಾಕಿಸ್ತಾನ ಕಾಲ್ಪನಿಕ ಲೋಕದಲ್ಲಿದೆ. ಪಾಕಿಸ್ತಾನದ ಹೇಳಿಕೆ ಆಧಾರ ರಹಿತ. ಈ ಹೇಳಿಕೆಯನ್ನು ನಾವು ಸ್ಪಷ್ಟವಾಗಿ ತಳ್ಳಿಹಾಕಿದ್ದೇವೆ" ಎಂದಿದ್ದಾರೆ.

ಭಾರತ ಬಾಲಕೋಟ್ ಏರ್ ಸ್ಟ್ರೈಕ್ ನಡೆಸಿದ್ದು ಸತ್ಯ: ಒಪ್ಪಿಕೊಂಡ ಇಮ್ರಾನ್ ಖಾನ್ಭಾರತ ಬಾಲಕೋಟ್ ಏರ್ ಸ್ಟ್ರೈಕ್ ನಡೆಸಿದ್ದು ಸತ್ಯ: ಒಪ್ಪಿಕೊಂಡ ಇಮ್ರಾನ್ ಖಾನ್

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ ಭಾರತ ಸರ್ಕಾರದ ನಡೆಯಿಂದ ಭಾರೀ ಆಘಾತ ಎದುರಿಸಿರುವ ಪಾಕಿಸ್ತಾನ ಈಗಾಗಲೇ ಗಡಿಯಲ್ಲಿ ಹೆಚ್ಚುವರಿ ಸೇನೆಯನ್ನು ನಿಯೋಜಿಸಿದೆ.

ಜೊತೆಗೆ ಭಾರತವೂ ಗಡಿಯಲ್ಲಿ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದ್ದು, ಉಭಯ ದೇಶಗಳ ನಡುವೆ ಉದ್ವಿಗ್ನ ವಾತಾವರಣ ತಲೆದೋರಿದೆ.

English summary
Pakistan claims it killed 5 Indian Soldiers in border in JK. India strongly rejects the claim and says, it is a baseless claim.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X