ಪಾಕಿಸ್ತಾನದಿಂದ ಮತ್ತೆ ಕದನವಿರಾಮ ಉಲ್ಲಂಘನೆ, ಭಾರತೀಯ ಯೋಧ ಹುತಾತ್ಮ
ಶ್ರೀನಗರ, ಆಗಸ್ಟ್ 23: ಜಮ್ಮು ಮತ್ತು ಕಾಶ್ಮೀರದ ನೌಶೇರಾ ಪ್ರದೇಶದ ಗಡಿನಿಯಂತ್ರಣ ರೇಖೆ ಬಳಿ ಕದನವಿರಾಮ ಉಲ್ಲಂಘಿಸಿ, ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಗೆ ಪ್ರತಿದಾಳಿ ನಡೆಸುವ ಸಂದರ್ಭದಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಕಣಿವೆ ರಾಜ್ಯದ ರಾಜೌರಿ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೂ ಪಾಕಿಸ್ತಾನ ಕದನವಿರಾಮ ಉಲ್ಲಂಘಿಸಿ, ಗುಂಡಿನ ದಾಳಿ ನಡೆಸುತ್ತಿತ್ತು. ಭಾರತೀಯ ಸೇನೆ ಆ ದಾಳಿಯನ್ನು ಸಮರ್ಥವಾಗಿ ಎದುರಿಸಿ, ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿತ್ತು. ಈ ಸಂದರ್ಭದಲ್ಲಿ ಏಕಾಏಕಿಯಾಗಿ ಪಾಕಿಸ್ತಾನ ಶೆಲ್ಲಿಂಗ್ ದಾಳಿ ನಡೆಸಿದ ಪರಿಣಾಮ ನಾಯ್ಕ್ ರಾಜಿಬ್ ಥಾಪಾ ಎಂದ ಯೋಧ ಹುತಾತ್ನರಾದರು.
Recommended Video
ರಾಜಿಬ್ ಮೂಲತಃ ಪಶ್ಚಿಮ ಬಂಗಾಳ ರಾಜ್ಯದ ಜಲಪೈಗುರಿ ಜಿಲ್ಲೆಯ ಮೆಖಾಪರದವರಾಗಿದ್ದು, ಪತ್ನಿ ಖುಷ್ಬು ಮಂಗಾರ್ ಥಾಪಾ ಅವರನ್ನು ಅಗಲಿದ್ದಾರೆ.

ಆಗಸ್ಟ್ 17 ರಂದು ಅಪ್ರಚೋದಿತ ಗುಂದಿನ ದಾಳಿ ಆರಂಭಿಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿತ್ತು. ಈ ಸಂದರ್ಭದಲ್ಲಿ ಲಾನ್ಸ್ ನಾಯಕ್ ಸಂದೀಪ್ ಥಾಪಾ ಎನ್ನುವವರು ಹುತಾತ್ಮರಾಗಿದ್ದರು.
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಹಿಂಪಡೆದ ನಂತರವೂ ಶಾಂತವಾಗಿಯೇ ಇರುವ ಕಾಶ್ಮೀರ ಕಣಿವೆಯಲ್ಲಿ ಅಶಾಂತಿ, ಹಿಂಸಾಚಾರ ಉಂಟು ಮಾಡಿ ವಿಶ್ವದ ಗಮನ ಸೆಳೆಯಲು ಪಾಕಿಸ್ತಾನ ಪ್ರಯತ್ನಿಸುತ್ತಿದ್ದು, ದಿನವೂ ಗುಂಡಿನ ದಾಳಿ ನಡೆಸುತ್ತಲೇ ಇದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications