ಭಾರತದ ಗಡಿಯೊಳಗೆ ನುಸುಳಲು 250-300 ಉಗ್ರರಿಂದ ಯತ್ನ:ಭಾರತೀಯ ಸೇನೆ ಎಚ್ಚರಿಕೆ
ನವದೆಹಲಿ, ಜುಲೈ 11: ಎಷ್ಟು ಕಲಿತರೂ ಬುದ್ದಿ ಬರದ ಪಾಕಿಸ್ತಾನ ಭಾರತದಲ್ಲಿ ಶಾಂತಿ ಕದಡುವ ಪ್ರಯತ್ನಕ್ಕೆ ಮತ್ತೆ ಕೈ ಹಾಕಿದಂತಿದೆ. ಇದಕ್ಕೆ ಸಾಕ್ಷಿ 250 ರಿಂದ 300 ಕ್ಕೂ ಹೆಚ್ಚು ಉಗ್ರರು ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ಎಚ್ಚರಿಸಿದೆ.
Recommended Video
ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯು ಕಳೆದ ಹಲವು ವಾರಗಳಿಂದ ಒಂದರ ಹಿಂದೆ ಮತ್ತೊಂದರಂತೆ ಎನ್ಕೌಂಟರ್ ಮಾಡುವ ಮೂಲಕ ಉಗ್ರರನ್ನು ಸದೆಬಡಿಯುತ್ತಿದೆ. ಹೀಗಾಗಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದು ಎಂದು ಸೇನೆಯು ಎಚ್ಚರಿಸಿದೆ.
ಕುಪ್ವಾರಾ ಗಡಿ ಜಿಲ್ಲೆಯ ನೌಗಮ್ ಸೆಕ್ಟರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಇಂದು ಒಳನುಸುಳುವಿಕೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿರುವಾಗ ಬಾರಾಮುಲ್ಲ ಪ್ರಾಂತ್ಯದ ಜನರಲ್-ಆಫೀಸರ್-ಕಮಾಂಡಿಂಗ್ (ಜಿಒಸಿ), ಮೇಜರ್ ಜನರಲ್ ವೀರೇಂದ್ರ ವ್ಯಾಟ್ಸ್, ಮಾತನಾಡಿ " ಅವರ ಲಾಂಚ್ ಪ್ಯಾಡ್ಗಳನ್ನು ಸಂಪೂರ್ಣವಾಗಿ ಉಗ್ರರು ಆಕ್ರಮಿಸಿಕೊಂಡಿದೆ ಎಂದು ಸೂಚಿಸುತ್ತದೆ. ನಾವು ಊಹಿಸಬೇಕಾದರೆ, ಅದು ಪ್ರಸ್ತುತ ಲಾಂಚ್ ಪ್ಯಾಡ್ಗಳನ್ನು ಆಕ್ರಮಿಸಿಕೊಂಡಿರುವ 250-300 ಭಯೋತ್ಪಾದಕರ ನಡುವೆ ಆಗಿರಬಹುದು." ಎಂದರು.

ನೌಗಂನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಅವರಿಂದ 1.5 ಲಕ್ಷ ಭಾರತೀಯ ಮತ್ತು ಪಾಕಿಸ್ತಾನಿ ಕರೆನ್ಸಿ ಸೇರಿದಂತೆ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಮ್ಮು ಮತ್ತು ಕಾಶ್ಮೀರದ ಶಾಂತಿಯನ್ನು ಭಂಗಗೊಳಿಸಲು ಕಾಶ್ಮೀರ ಕಣಿವೆಯಲ್ಲಿ ಹೆಚ್ಚು ಹೆಚ್ಚು ಭಯೋತ್ಪಾದಕರನ್ನು ತಳ್ಳಲು ಪಾಕಿಸ್ತಾನ ತೀವ್ರವಾಗಿ ಪ್ರಯತ್ನಿಸುತ್ತಿದೆ ಎಂದು ಮೇಜರ್ ಜನರಲ್ ವೀರೇಂದ್ರ ವ್ಯಾಟ್ಸ್ ಎಚ್ಚರಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications