ಜಮ್ಮು ಕಾಶ್ಮೀರ ಎನ್ ಕೌಂಟರ್ ನಲ್ಲಿ ಸತ್ತವರು ನಿಜವಾಗಿ ಉಗ್ರರೇ?
ಶ್ರೀನಗರ್, ಸಪ್ಟೆಂಬರ್.18: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ವಿವಾದಾತ್ಮಕ ಎನ್ ಕೌಂಟರ್ ನಲ್ಲಿ ಯೋಧರೇ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೂವರು ಉಗ್ರರ ಹತ್ಯೆಗೆ ಸಂಬಂಧಿಸಿದಂತೆ ವಿವಾದ ಸೃಷ್ಟಿಯಾಗಿದೆ.
ಆಪಾದಿತ ಯೋಧರ ಕುರಿತು ಸೇನೆಗೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದ್ದು, ತಪ್ಪಿತಸ್ಥ ಯೋಧರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಭಾರತೀಯ ಸೇನೆಯು ಸ್ಪಷ್ಟನೆ ನೀಡಿದೆ. ಶೋಪಿಯಾನ್ ನಲ್ಲಿ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೂವರು ಯುವಕರನ್ನು ಉಗ್ರರು ಎಂದು ಶಂಕಿಸಿ ಹತ್ಯೆಗಯ್ಯಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಭಾರತೀಯ ಸೇನೆಯ ಯೋಧರು ಸಶಸ್ತ್ರ ಪಡೆಗಳ ವಿಶೇಷ ಶಕ್ತಿ ಕಾಯ್ದೆ ಅಥವಾ ಎಎಫ್ಎಸ್ಪಿಎ ಅಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಮೀರಿದ್ದಾರೆ ಎಂದು ಸೇನೆಯೇ ಸ್ಥಾಪಿಸಿದ ವಿಚಾರಣಾ ನ್ಯಾಯಾಲಯ ತಿಳಿಸಿದೆ.

ನಿಯಮ ಉಲ್ಲಂಘಿಸಿರುವ ಬಗ್ಗೆ ಸಾಕ್ಷ್ಯ:
"ಸೇನಾ ಪ್ರಾಧಿಕಾರದ ಅಂಶಿಪೋರಾ ನಡೆಸಿದ ತನಿಖೆಯು ಪೂರ್ಣಗೊಂಡಿದೆ. ಯೋಧರ ವಿಚಾರಣೆ ವೇಳೆ ಎಎಫ್ಎಸ್ಪಿಎ 1990ರ ಅಡಿ ನೀಡಿರುವ ಅಧಿಕಾರವನ್ನು ಮೀರಿದೆ. ನಿಗದಿತ ಅಧಿಕಾರವನ್ನು ಯೋಧರು ಉಲ್ಲಂಘಿಸಿರುವ ಬಗ್ಗೆ ಪ್ರಾಥಮಿಕ ವಿಚಾರಣೆ ಸಂದರ್ಭದಲ್ಲಿ ಲಭ್ಯವಾದ ಸಾಕ್ಷ್ಯಗಳಿಂದ ಸಾಬೀತಾಗಿದೆ" ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಇನ್ನು ವಿವಾದಿತ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಮೂವರು ಶಂಕಿತ ಭಯೋತ್ಪಾದಕರನ್ನು ಇಮ್ತಿಯಾಜ್ ಅಹ್ಮದ್, ಅಬ್ರಾರ್ ಅಹ್ಮದ್ ಮತ್ತು ಮೊಹಮ್ಮದ್ ಇಬ್ರಾರ್ ಎಂದು ವಿಚಾರಣೆಯಿಂದ ಸಂಗ್ರಹಿಸಲಾದ ಸಾಕ್ಷ್ಯಗಳು ಸೂಚಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಆಪ್ ಅಮ್ಶಿಪೋರಾದಲ್ಲಿ ಹತ್ಯೆಗೀಡಾದ ಮೂವರು ಅಪರಿಚಿತ ಭಯೋತ್ಪಾದಕರು ರಾಜೌರಿಯಿಂದ ಬಂದವರು ಎನ್ನಲಾಗಿದೆ. ಸೇನಾ ಎನ್ ಕೌಂಟರ್ ನಲ್ಲಿ ಬಲಿಯಾದವರು ಉಗ್ರರೇ ಅಥವಾ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದವರೇ ಎನ್ನುವುದನ್ನು ಪತ್ತೆ ಮಾಡುವುದಕ್ಕಾಗಿ ಡಿಎನ್ಎ ಪರೀಕ್ಷಾ ವರದಿಗಾಗಿ ಪೊಲೀಸರು ಎದುರು ನೋಡುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications