ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಗುಲಾಂ ನಬಿ ಆಜಾದ್‌ಗೆ ಆಘಾತ

|
Google Oneindia Kannada News

ಶ್ರೀನಗರ, ಆಗಸ್ಟ್ 08: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಕಲಂ 370 ರದ್ದುಗೊಂಡ ಬಳಿಕ ಶ್ರೀನಗರಕ್ಕೆ ಗುರುವಾರ ಆಗಮಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್‌ಗೆ ಆಘಾತ ಕಾದಿತ್ತು. ಶ್ರೀನಗರ ವಿಮಾನ ನಿಲ್ದಾಣದಲ್ಲೇ ಅವರನ್ನು ಅಲ್ಲಿನ ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ನಗರದೊಳಗೆ ಪ್ರವೇಶಿಸಲು ನಿರ್ಬಂಧವಿದೆ ಎಂದು ಹೇಳಿದ್ದಾರೆ.

ಕಾಶ್ಮೀರ ಕುರಿತು ಕೈ ಮುಖಂಡನ ಹೇಳಿಕೆಗೆ ಸೋನಿಯಾ ಅಸಮಾಧಾನ: ಶಾ ಕೊಟ್ಟರು ದಿಟ್ಟ ಉತ್ತರಕಾಶ್ಮೀರ ಕುರಿತು ಕೈ ಮುಖಂಡನ ಹೇಳಿಕೆಗೆ ಸೋನಿಯಾ ಅಸಮಾಧಾನ: ಶಾ ಕೊಟ್ಟರು ದಿಟ್ಟ ಉತ್ತರ

ಕಲಂ 370ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ಹಲವೆಡೆ ಸುರಕ್ಷತಾ ದೃಷ್ಟಿಯಿಂದ ಕರ್ಪ್ಯೂ ಹೇರಲಾಗಿದೆ, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದೆ, ಸೂಕ್ಷ್ಮ ಪರಿಸ್ಥಿತಿಯಲ್ಲಿ ಹಲವು ನಾಯಕರಿಗೆ ನಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ಗುಲಾಂ ಅಹ್ಮದ್ ಮೀರ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಅಜಾದ್ ಅವರನ್ನು ತಡೆದಿದ್ದಲ್ಲದೆ, ಬಲವಂತವಾಗಿ ದೆಹಲಿಗೆ ಹಿಂತಿರುಗುವಂತೆ ಸೂಚಿಸಲಾಗಿದೆ.

J&K tense: Ghulam Nabi Azad stopped at Srinagar Airport, sent back to New Delhi

ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸಲು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ, ಅನೇಕ ಪ್ರತ್ಯೇಕತಾವಾದಿಗಳನ್ನು ಬಂಧಿಸಲಾಗಿದೆ. ಯಾವುದೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಎಲ್ಲೆಡೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಪ್ರಧಾನಿ ಪಟ್ಟ ಬೇಕಿಲ್ಲ ಎಂದು ಸೋಲೊಪ್ಪಿಕೊಂಡಿತೇ ಕಾಂಗ್ರೆಸ್? ಪ್ರಧಾನಿ ಪಟ್ಟ ಬೇಕಿಲ್ಲ ಎಂದು ಸೋಲೊಪ್ಪಿಕೊಂಡಿತೇ ಕಾಂಗ್ರೆಸ್?

ಮೋದಿ ಸರ್ಕಾರವು ಕಲಂ 370ರದ್ದು ಪಡಿಸಲು ಅನುಸರಿಸಿದ ಕ್ರಮ, ವಿಶೇಷ ಅಧಿಕಾರ ಹಿಂಪಡೆದಿದ್ದನ್ನು ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಗುಲಾಂ ನಬಿ ಅಜಾದ್ ಅವರು ಕಟುವಾಗಿ ಖಂಡಿಸಿದ್ದರು. ದೇಶದ ಭೂಶಿರ ಭಾಗವನ್ನು ಬಿಜೆಪಿ ಕತ್ತರಿಸಿದೆ ಎಂದೆಲ್ಲ ಟೀಕಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
J&K tense over Article 370: Congress leader and former Jammu and Kashmir chief minister Ghulam Nabi Azad stopped at Srinagar Airport and sent back to New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X