ಶ್ರೀನಗರದಲ್ಲಿ ಮೂವರು ಉಗ್ರರನ್ನು ಬಲಿ ಹಾಕಿದ ಸೇನೆ
ಶ್ರೀನಗರ, ಜೂನ್ 21: ಗಡಿಭಾಗದಲ್ಲಿ ಉಗ್ರರು ಹಾಗೂ ಭಾರತೀಯ ಸೇನೆ ನಡುವೆ ಭಾನುವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಮುಂಜಾಗರೂಕತೆಯಿಂದ ನಗರದಲ್ಲಿ ಇಂಟರ್ನೆಟ್ ಬಂದ್ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.
Recommended Video
ಶ್ರೀನಗರದ ಝಾದಿಬಾಲ್ ಎಂಬ ಪ್ರದೇಶದಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದ ಬಗ್ಗೆ ಮಾಹಿತಿ ಪಡೆದ ಸೇನೆ ಸತತವಾಗಿ ಗುಂಡಿನ ಮಳೆಗೈದು, ಮೂವರು ಉಗ್ರರನ್ನು ಬಲಿ ಹಾಕಿದ್ದಾರೆ. ಇನ್ನೊಂದೆಡೆ ಶೋಪಿಯಾನ್ ನಲ್ಲಿ ಒಬ್ಬ ಉಗ್ರನನ್ನು ಭಾರತೀಯ ಸೇನೆಯು ಗುಂಡಿಕ್ಕಿ ಹತ್ಯೆ ಮಾಡಿದೆ.
ಝಾದಿಬಾಲ್ ನ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ಪಡೆದ ಬಳಿಕ ಸಿಅರ್ ಪಿಎಫ್ QAT (Quick Action Team), 115 ಬೆಟಾಲಿಯನ್, 28 ಬೆಟಾಲಿಯನ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಜೂನಿಮಾರ್ ಪೋಂಜ್ವಾಲ್ ಪೊರಾ ಪ್ರದೇಶವನ್ನು ಸುತ್ತುವರೆದು, ಉಗ್ರರು ಕದಲದಂತೆ ಮಾಡಿ, ಹೊಸಕಿ ಹಾಕಿದ್ದಾರೆ.

ಇತ್ತೀಚೆಗೆ ಕತುವಾ ಜಿಲ್ಲೆಯಲ್ಲಿ ಹಾರಾಡುತ್ತಿದ್ದ ಡ್ರೋನ್ ಮೇಲೆ ಗುಂಡು ಹಾರಿಸಿ ಹೊಡೆದುರುಳಿಸಿ, ಶಸ್ತ್ತಾಸ್ತ್ರಗಳನ್ನು ಬಿಎಸ್ಎಫ್ ವಶಪಡಿಸಿಕೊಂಡಿತ್ತು. ಕತುವಾ ಪ್ರದೇಶದಲ್ಲಿ ಪಾಕ್ನ ಡ್ರೋನ್ ಹಾರಾಟವನ್ನು ಬಿಎಸ್ಎಫ್ನ ಪೆಟ್ರೋಲಿಂಗ್ ತಂಡವು ಹತ್ತಿಕ್ಕಿದ್ದನ್ನು ಸ್ಮರಿಸಬಹುದು. ಜೂನ್ ತಿಂಗಳಿನಲ್ಲಿ ಶೋಪಿಯಾನ್ ಜಿಲ್ಲೆಯ ಪಿಂಜೋರಾ ಪ್ರದೇಶದಲ್ಲಿ ನಾಲ್ವರು ಉಗ್ರರನ್ನು ಕೊಂದು ಹಾಕಲಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications