ಜಮ್ಮು ಮತ್ತು ಕಾಶ್ಮೀರ: ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
ಶ್ರೀನಗರ, ಮಾರ್ಚ್ 22: ಜಮ್ಮು ಮತ್ತು ಕಾಶ್ಮೀರದ ಬಂಡಿಪೊರದ ಹಾಜಿನ್ ಎಂಬಲ್ಲಿ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಅಷ್ಟೇ ಅಲ್ಲ, ಇಲ್ಲಿನ ಶೋಪಿಯಾನ್ ಜಿಲ್ಲೆಯಲ್ಲಿಯೂ ನಡೆದ ಎನ್ ಕೌಂಟರ್ ದಾಳಿಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಬಾಲಕೋಟ್ ನಿಂದ ಪಾಕ್ ಸರ್ಕಾರವೇ ಉಗ್ರರನ್ನು ಸಾಗಿಸಿತ್ತು: ಭುಟ್ಟೋ ಸ್ಫೋಟಕ ಹೇಳಿಕೆ
ಶೋಪಿಯಾನ್ ನ ರಾತ್ನಿಪೊರ ಎಂಬಲ್ಲಿ ಮನೆಯೊಂದರಲ್ಲಿ ಎರಡರಿಂದ ಮೂವರು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ. ಎನ್ ಕೌಂಟರ್ ದಾಳಿ ಮುಂದುವರಿದಿದ್ದು, ಹತ್ಯೆಗೊಳಗಾದ ಉಗ್ರರು ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
34 ರಾಷ್ಟ್ರೀಯ ರೈಫಲ್, ಸಿಆರ್ ಪಿಎಫ್, ಮತ್ತು ಜಮ್ಮು-ಕಾಶ್ಮೀರ ವಿಶೇಷ ಕಾರ್ಯಾಚರಣೆ ತಂಡ(ಎಸ್ ಒಜಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ: ಓರ್ವ ಯೋಧ ಹುತಾತ್ಮ
ಗುರುವಾರ ಸಿಆರ್ ಪಿಎಫ್ ಯೋಧರ ಶಿಬಿರದ ಮೇಲೆ ಉಗ್ರರು ಗ್ರೆನೆಡ್ ದಾಳಿ ನಡೆಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.