ಜಮ್ಮು-ಕಾಶ್ಮೀರದಲ್ಲಿ 9 ಹಿಜ್ಬುಲ್ ಉಗ್ರರನ್ನು ಹೊಡೆದುರುಳಿಸಿದ ಸೇನೆ
ಶ್ರೀನಗರ್, ಜೂನ್.08: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಬಾಲಬಿಚ್ಚಿದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಒಂಭತ್ತು ಉಗ್ರರನ್ನು ಭಾರತೀಯ ಸೇನಾ ಯೋಧರು ಹೊಡೆದುರುಳಿಸಿದ್ದಾರೆ.
ಶೋಪಿಯಾನ್ ಜಿಲ್ಲೆಯ ಪಿಂಜೋರಾ ಪ್ರದೇಶದಲ್ಲಿ ಸೋಮವಾರ ಉಗ್ರರು ಮತ್ತು ಸೇನಾ ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈದಿರುವುದಾಗಿ ಜಮ್ಮು-ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದರು.
ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್: 5 ಉಗ್ರರ ಸಾವು
ಭಾರತೀಯ ಸೇನೆಯು ನಾಲ್ವರು ಉಗ್ರರ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದ್ದು, ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ. ಇನ್ನು, ಕಾರ್ಯಾಚರಣೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಆರ್ ಪಿಎಫ್ ಮತ್ತು ಸೇನಾ ಗಡಿಯಲ್ಲಿ ಕಾರ್ಯಾಚರಣೆ:
ಜಮ್ಮು-ಕಾಶ್ಮೀರದ ಮತ್ತೊಂದು ಕಡೆಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರನ್ನು ಹತ್ಯೆಗಯ್ಯಲಾಗಿದೆ. ಎರಡು ಎಕೆ-47 ರೈಫಲ್ಸ್, ಒಂದು ಎಸ್ಎಲ್ಆರ್, ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ. ಇದಕ್ಕೂ ಮೊದಲು ಕಳೆದ ಭಾನುವಾರ ರಾತ್ರಿ ಶೋಪಿಯಾನ್ ಜಿಲ್ಲೆಯ ರೆಬಾನ್ ಪ್ರದೇಶದಲ್ಲಿ ಅಡಗಿ ಕುಳಿತ ಮುಜಾಹಿದ್ದೀನ್ ಉಗ್ರರ ಸದೆ ಬಡಿಯಲು ಕಾರ್ಯಾಚರಣೆ ನಡೆಸಲಾಯಿತು. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ.