ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ: ಓರ್ವ ಯೋಧ ಹುತಾತ್ಮ
ಶ್ರೀನಗರ, ಮಾರ್ಚ್ 21: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಕ್ಯಾಂಪ್ ಮೇಲೆ ನಡೆದ ಗ್ರೆನೇಡ್ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಈ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದ್ದು, ಭಯೋತ್ಪಾದಕರೇ ಗ್ರೆನೇಡ್ ದಾಳಿ ನಡೆಸಿರುವುದು ತಿಳಿದುಬಂದಿದೆ. ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇಂದು ಬೆಳಿಗ್ಗೆಯಿಂದಲೂ ಪಾಕಿಸ್ತಾನ ಗಡಿಯಲ್ಲಿ ಕದನವಿರಾಮ ಉಲ್ಲಂಘಿಸುತ್ತಿರುವ ಮಾಹಿತಿಯೂ ಲಭ್ಯವಾಗಿದೆ.

ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಜಮ್ಮು ಕಾಶ್ಮೀರದ ಉದಾಮ್ ಪುರದಲ್ಲಿ ಸಿಆರ್ ಪಿಎಫ್ ಜವಾನನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಜವಾನರು ಬಲಿಯಾಗಿದ್ದರು. ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ ಭಾರತದ ನಲವತ್ತಕ್ಕೂ ಹೆಚ್ಚು ಸೈನಿಕರು ಹುತಾತ್ಮರಾದ ನಂತರ ಭಾರತ ಭಯೋತ್ಪಾದಕರ ವಿರುದ್ಧ ನಿರಂತರವಾಗಿ ದಾಳಿ ನಡೆಸುತ್ತಿದ್ದ. ಅದಕ್ಕೆ ಭಯೋತ್ಪಾದಕರೂ ಪ್ರತಿದಾಳಿ ನಡೆಸುತ್ತಿದ್ದು, ಇಂದು ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications