ಡಿಡಿಸಿ ಚುನಾವಣೆ: ಕಾಶ್ಮೀರ ಗುಪ್ಕರ್ ಅಲೈಯನ್ಸ್ಗೆ, ಜಮ್ಮು ಬಿಜೆಪಿ ತೆಕ್ಕೆಗೆ
ಶ್ರೀನಗರ, ಡಿಸೆಂಬರ್ 23: ಕುತೂಹಲ ಮೂಡಿಸಿದ್ದ ಜಮ್ಮು ಮತ್ತು ಕಾಶ್ಮೀರದ ಜಿಲ್ಲಾಭಿವೃದ್ಧಿ ಸಮಿತಿ ಚುನಾವಣೆಯಲ್ಲಿ (ಡಿಡಿಸಿ) ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ನೇತೃತ್ವದ ಗುಪ್ಕರ್ ಅಲೈಯನ್ಸ್ 280 ಸೀಟುಗಳ ಪೈಕಿ 112 ಸೀಟುಗಳಲ್ಲಿ ಗೆಲುವು ಮತ್ತು ಮುನ್ನಡೆ ಸಾಧಿಸುವ ಮೂಲಕ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ ಕಣಿವೆ ರಾಜ್ಯದಲ್ಲಿ ಕಮಲ ಮೇಲುಗೈ ಸಾಧಿಸಿದೆ. ಏಕಾಂಗಿಯಾಗಿ ಹೋರಾಡಿದ ಬಿಜೆಪಿ 74 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇನ್ನು ಕಾಂಗ್ರೆಸ್ 26 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನದ ರದ್ದತಿ ಬಳಿಕ ಇದೇ ಮೊದಲ ಬಾರಿ ಡಿಡಿಸಿ ಚುನಾವಣೆ ನಡೆದಿದ್ದು, 370ನೇ ವಿಧಿಯನ್ನು ಮರಳಿ ಸ್ಥಾಪಿಸುವ ಶಪಥದೊಂದಿಗೆ ಫಾರೂಕ್ ಅಬ್ದುಲ್ಲಾ ನೇತೃತ್ವದಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಮತ್ತು ಇತರೆ ಸ್ಥಳೀಯ ಪಕ್ಷಗಳು ಕೈಜೋಡಿಸಿ ಗುಪ್ಕರ್ ಅಲೈಯನ್ಸ್ (ಪಿಎಜಿಡಿ) ಒಕ್ಕೂಟ ರಚಿಸಿ ಚುನಾವಣೆ ಎದುರಿಸಿವೆ.
ಬುಧವಾರದವರೆಗೆ ನಡೆದ ಮತ ಎಣಿಕೆಯಲ್ಲಿ ಗುಪ್ಕರ್ ಅಲೈಯನ್ಸ್ 100 ಕ್ಷೇತ್ರಗಳಲ್ಲಿ ಗೆದ್ದಿದ್ದು, 12ರಲ್ಲಿ ಮುನ್ನಡೆ ಸಾಧಿಸಿದೆ ಎಂದು ಕೇಂದ್ರಾಡಳಿತ ಪ್ರದೇಶ ಚುನಾವಣಾ ಆಯೋಗ ತಿಳಿಸಿದೆ. ಎಲ್ಲ ಪ್ರಮುಖ ರಾಜಕೀಯ ಪಕ್ಷಗಳಿಂದ ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಿದವರೇ ಹೆಚ್ಚಿರುವ 49 ಮಂದಿ ಪಕ್ಷೇತರರರು ಜಯಗಳಿಸಿದ್ದು, ಇನ್ನೂ ಆರು ಮಂದಿ ಮುನ್ನಡೆ ಸಾಧಿಸಿದ್ದಾರೆ.

ಜಮ್ಮುವಿನಲ್ಲಿ ಬಿಜೆಪಿ ಪ್ರಾಬಲ್ಯ ಮೆರೆದಿದೆ. ಇಲ್ಲಿ ಕನಿಷ್ಠ ಆರು ಜಿಲ್ಲಾಭಿವೃದ್ಧಿ ಸಮಿತಿಗಳನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಕಾಶ್ಮೀರದಲ್ಲಿ ಸಂಪೂರ್ಣ ಮುಗ್ಗರಿಸಿದ್ದು, ಒಂದೂ ಜಿಲ್ಲಾ ಸಮಿತಿಯಲ್ಲಿ ಅಧಿಕಾರಕ್ಕೆ ಬಂದಿಲ್ಲ. ಆದರೆ ಕಣಿವೆಯಲ್ಲಿ ಪಿಎಡಿಜಿ 9ರಲ್ಲಿ ಗೆಲುವು ಕಂಡಿದೆ. ಐದು ಸಮಿತಿಗಳಲ್ಲಿ ಬಹುಮತದ ಬಗ್ಗೆ ಸ್ಪಷ್ಟನೆ ದೊರಕಿಲ್ಲ. ಇಲ್ಲಿ ಪಕ್ಷೇತರರು ಕಿಂಗ್ ಮೇಕರ್ಗಳಾಗಲಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications