ಜಮ್ಮು ಕಾಶ್ಮೀರದಲ್ಲಿ ಚೀನಾದ ಸಹಾಯದಿಂದ ಮತ್ತೆ 370ನೇ ವಿಧಿ ಜಾರಿ: ಫಾರೂಕ್ ಅಬ್ಲುಲ್ಲಾ
ಶ್ರೀನಗರ, ಅಕ್ಟೋಬರ್ 12: ಚೀನಾದ ಸಹಾಯದಿಂದ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಪುನಃಸ್ಥಾಪಿಸುತ್ತೇವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.
5 ಆಗಸ್ಟ್ 2019 ರಂದು 370ನೇ ವಿಧಿ ತೆಗೆದುಹಾಕಲು ತೆಗೆದುಕೊಂಡ ನಿರ್ಧಾರವನ್ನು ಎಂದಿಗೂ ಒಪ್ಪಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಯಾವುದೇ ಉದ್ವಿಗ್ನ ಪರಿಸ್ಥಿತಿ ಏನಿದೆಯೋ ಇದಕ್ಕೆಲ್ಲಾ 370ನೇ ವಿಧಿ ರದ್ದತಿಯೇ ಕಾರಣ . ಚೀನಾ ಈ ನಿರ್ಧಾರವನ್ನು ಎಂದಿಗೂ ಸಮ್ಮತಿಸಿರಲಿಲ್ಲ ಚೀನಾದ ಸಹಾಯದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಪುನಃಸ್ಥಾಪಿಸಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದರು.

370 ನೇ ವಿಧಿ ರದ್ದಾದ ತಕ್ಷಣ ಜಮ್ಮು ಮತ್ತು ಕಾಶ್ಮೀರದ ಉನ್ನತ ರಾಜಕಾರಣಿಗಳೆಲ್ಲರನ್ನು ಗೃಹಬಂಧನದಲ್ಲಿರಿಸಲಾಗಿತ್ತು. ಫಾರೂಕ್ ಅಬ್ದುಲ್ಲಾ, ಅವರ ಪುತ್ರ ಮತ್ತು ಮಾಜಿ ಸಿಎಂ ಒಮರ್ ಅಬ್ದುಲ್ಲಾ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಸೇರಿದಂತೆ ಎಲ್ಲ ರಾಜಕಾರಣಿಗಳನ್ನು 370 ನೇ ವಿಧಿ ರದ್ದಾದ ನಂತರ ಬಂಧನದಲ್ಲಿಡಲಾಗಿತ್ತು ಫಾರೂಕ್ ಅಬ್ದುಲ್ಲಾ ಪ್ರಸ್ತುತ ಶ್ರೀನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಕೇಂದ್ರ ಸರ್ಕಾರದಲ್ಲಿ ಸಹ ಬಹುಕಾಲ ಸೇವೆ ಸಲ್ಲಿಸಿದ್ದರು.
ಪ್ರಧಾನಿ ಮೋದಿ ಅವರು ಚೀನಾದ ಅಧ್ಯಕ್ಷರನ್ನು ಆಹ್ವಾನಿಸಿದ್ದಾರೆ ಹೊರತು ನಾನೆಂದೂ ಚೀನಾ ಅಧ್ಯಕ್ಷರನ್ನು ಭಾರತಕ್ಕೆ ಕರೆದಿಲ್ಲಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಚೀನಾ ಅಧ್ಯಕ್ಷರನ್ನು ಭಾರತಕ್ಕೆ ಆಹ್ವಾನಿಸಿದ ವ್ಯಕ್ತಿ ಪಿಎಂ ನರೇಂದ್ರ ಮೋದಿ. ಅವರು ಚೀನಾದ ಅಧ್ಯಕ್ಷರನ್ನುರತ್ನಗಂಬಳಿ ಹಾಕಿ ಸ್ವಾಗತಿಸಿದ್ದರು.
ಅವರೊಂಡನೆ ಚೆನ್ನೈ ಸುತ್ತಿದ್ದರು. ಆದರೆ ನಾನೊಬ್ಬ ಸಂಸದರಾಗಿದ್ದರೂ . ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಗಳ ಕುರಿತು ಮಾತನಾಡಲು ನನಗೆ ಅವಕಾಶ ನೀಡಿಲ್ಲವೆಂದು ಅವರು ಆರೋಪಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications