ನಾವು ಜತೆಗೂಡಿದರೆ ಪರಿಸ್ಥಿತಿಯನ್ನು ಬದಲಿಸಬಹುದು: ಕಾಶ್ಮೀರದ ಬಗ್ಗೆ ಮೆಹಬೂಬ ಮುಫ್ತಿ ಹೇಳಿಕೆ
ಶ್ರೀನಗರ, ಅಕ್ಟೋಬರ್ 14: ಸುದೀರ್ಘ ಕಾಲದ ಬಂಧನದ ಬಳಿಕ ಮಂಗಳವಾರ ರಾತ್ರಿ ಬಿಡುಗಡೆಯಾದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖಂಡರಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಅವರು ಬುಧವಾರ ಭೇಟಿ ಮಾಡಿದರು.
ಮೆಹಬೂಬ ಮುಫ್ತಿ ನಿವಾಸಕ್ಕೆ ಭೇಟಿ ನೀಡಿದ ನಾಯಕರು, ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಎಲ್ಲ ಪ್ರಮುಖ ಪ್ರಾದೇಶಿಕ ರಾಜಕೀಯ ಪಕ್ಷಗಳ ಸಭೆಗೆ ಅವರನ್ನು ಆಹ್ವಾನಿಸಿದರು.
ಕಳೆದ ವರ್ಷದ ಆಗಸ್ಟ್ 5ರಂದು ಬಂಧನಕ್ಕೆ ಒಳಗಾಗಿದ್ದ ಮೆಹಬೂಬ ಮುಫ್ತಿ ಅವರನ್ನು ಭೇಟಿ ಮಾಡಲು ಅವರ ಗುಪ್ಕರ್ ನಿವಾಸಕ್ಕೆ ಪಿಡಿಪಿ ಮುಖಂಡರು ಮತ್ತು ಬೆಂಬಲಿಗರು ಕಣಿವೆಯ ವಿವಿಧ ಭಾಗಗಳಿಂದ ತೆರಳಿದ್ದರು.

'ಬಂಧನದಿಂದ ಬಿಡುಗಡೆಯಾದ ಮೆಹಬೂಬ ಮುಫ್ತಿ ಸಾಹಿಬಾ ಅವರ ಯೋಗ ಕ್ಷೇಮ ವಿಚಾರಿಸಲು ನಾನು ಮತ್ತು ನನ್ನ ತಂದೆ ಅವರನ್ನು ಭೇಟಿ ಮಾಡಿದ್ದೆವು. ಗುರುವಾರ ಮಧ್ಯಾಹ್ನ ಆಯೋಜಿಸಿರುವ ಗುಪ್ಕರ್ ಡಿಕ್ಲೇರೇಷನ್ ಸಭೆಗೆ ಪಾಲ್ಗೊಳ್ಳುವಂತೆ ಮಾಡಿದ ಆಹ್ವಾನವನ್ನು ಅವರು ಒಪ್ಪಿಕೊಂಡಿದ್ದಾರೆ' ಎಂದು ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.
'ನೀವಿಬ್ಬರೂ ಮನೆಗೆ ಭೇಟಿ ನೀಡಿದ ಸಂಗತಿ ಖುಷಿ ನೀಡಿತು. ಫಾರೂಕ್ ಸಾಹೇಬ್ ಅವರ ಮಾತುಗಳು ನನ್ನಲ್ಲಿ ಧೈರ್ಯ ತುಂಬಿದವು. ನಾವೆಲ್ಲರೂ ಸೇರಿ ಒಳಿತಿಗಾಗಿ ಸನ್ನಿವೇಶದವನ್ನು ಬದಲಿಸಬಹುದು ಎನ್ನುವ ಖಾತರಿ ನನಗಿದೆ' ಎಂದು ಒಮರ್ ಅಬ್ದುಲ್ಲಾ ಅವರಿಗೆ ಮುಫ್ತಿ ಪ್ರತಿಕ್ರಿಯೆ ನೀಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications