ಜಮ್ಮು- ಕಾಶ್ಮೀರ: ಭಾರತೀಯ ಸೇನೆಯಿಂದ ಮೂವರು ಭಯೋತ್ಪಾದಕರ ಹತ್ಯೆ
ಶೋಪಿಯಾನ್, ಮಾರ್ಚ್ 28: ಭಾರತೀಯ ಸೇನೆ ಗುರುವಾರ ಬೆಳಿಗ್ಗೆ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ.
ಜಮ್ಮು ಕಾಶ್ಮೀರದ ಶೋಪಿಯಾನ್ ನ ಕೆಲ್ಲಾರ್ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಸಿಆರ್ ಪಿಎಫ್, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ದಾಳಿ ನಡೆಸಿ, ಮೂವರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾದರು.
ಜಮ್ಮು ಮತ್ತು ಕಾಶ್ಮೀರ: ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
ಇಲ್ಲಿನ ಹಂಡ್ವಾರ ಪ್ರದೇಶದ ಯಾರೂ ಎಂಬಲ್ಲಿಯೂ ಇಂದು ಬೆಳಿಗ್ಗೆಯಿಂದಲೇ ಗುಂಡಿನ ಚಕಮಕಿ ಆರಂಭವಾಗಿದೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಳೆದ ಮಾರ್ಚ್ 22 ರಂದು ಜಮ್ಮುಮತ್ತು ಕಾಶ್ಮೀರದ ಬಂಡಿಪೊರದ ಹಾಜಿನ್ ಎಂಬಲ್ಲಿ ಭಾರತೀಯ ಸೇನೆ ಮೂವರು ಭಯೋತ್ಪಾದಕರನ್ನು ಹತ್ಯೆಗೈದಿತ್ತು.
ಪುಲ್ವಾಮಾದಲ್ಲಿ ನಲವತ್ತಕ್ಕೂ ಹೆಚ್ಚು ಭಾರತೀಯ ಯೋಧರನ್ನು ಜೈಷ್ ಇ ಮೊಹಮ್ಮದ್ ಉಗ್ರನೊಬ್ಬ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಹತ್ಯೆಗೈದ ನಂತರ ಭಾರತ, ಪಾಕಿಸ್ತಾನದ ಭಯೋತ್ಪಾದಕ ನೆಲೆಯ ಮೇಲೆ ದಾಳಿ ನಡೆಸಿತ್ತು.
ಈ ಘಟನೆಯ ನಂತರ ಗಡಿಯಲ್ಲಿ ಉಗ್ರ ಚಟುವಟಿಕೆಯನ್ನು ಹತ್ತಿಕ್ಕುವವಲ್ಲಿ ಪಣತೊಟ್ಟಿರುವ ಭಾರತೀಯ ಸೇನೆ, ದಿನ ದಿನವೂ ಎನ್ ಕೌಂಟರ್ ದಾಳಿಯಲ್ಲಿ ಭಯೋತ್ಪಾದಕರನ್ನು ಹತ್ಯೆಗೈಯುತ್ತಿದೆ.