ಜಮ್ಮು & ಕಾಶ್ಮೀರ: ಕೇಂದ್ರದ ವಿರುದ್ಧ ಹೋರಾಟಕ್ಕೆ ಹೊಸ ಮೈತ್ರಿಕೂಟ ರಚನೆ
ಶ್ರೀನಗರ, ಅಕ್ಟೋಬರ್ 15: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗುರುವಾರ ಮೊದಲ ಬಾರಿಗೆ ಸಭೆ ಸೇರಿದ ಗುಪ್ಕರ್ ಘೋಷಣೆಯ ಸಹಿ ಹಾಕಿರುವ ರಾಜಕೀಯ ಪಕ್ಷಗಳು, ಕಣಿವೆಯಲ್ಲಿ ವಿಶೇಷ ಸ್ಥಾನಮಾನವನ್ನು ಮರಳಿ ಜಾರಿ ಮಾಡುವ ಹೋರಾಟದ ಗುರಿಯೊಂದಿಗೆ ಹೊಸ ಮೈತ್ರಿಕೂಟವನ್ನು ರಚಿಸಿವೆ.
'ನಮ್ಮ ಮೈತ್ರಿಕೂಟಕ್ಕೆ ಗುಪ್ಕರ್ ಘೋಷಣೆಯ ಜನರ ಮೈತ್ರಿಕೂಟ ಎಂದು ಹೆಸರಿಟ್ಟಿದ್ದೇವೆ. ನಮ್ಮ ಹೋರಾಟವು ಸಾಂವಿಧಾನಿಕ ಹೋರಾಟ. ಭಾರತ ಸರ್ಕಾರವು 2019ರ ಆಗಸ್ಟ್ 5ಕ್ಕೂ ಮುನ್ನ ರಾಜ್ಯದ ಜನತೆಗೆ ಇದ್ದ ಹಕ್ಕುಗಳನ್ನು ವಾಪಸ್ ನೀಡುವುದನ್ನು ಬಯಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ಸಾಂವಿಧಾನಿಕ ಮಾನ್ಯತೆಯನ್ನು ಮರಳಿ ತರುವ ಗುರಿ ಹೊಂದಿದ್ದೇವೆ' ಎಂದು ಆರು ರಾಜಕೀಯ ಪಕ್ಷಗಳ ಸಭೆಯ ಬಳಿಕ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ತಿಳಿಸಿದರು.
ಎನ್ಸಿ, ಪಿಡಿಪಿ, ಸಿಪಿಎಂ, ಪಿಸಿ, ಜೆಕೆಪಿಎಂ ಮತ್ತು ಎಎನ್ಸಿ ಪಕ್ಷಗಳು ಈ ನೂತನವಾಗಿ ರಚಿಸಿದ ಮೈತ್ರಿಕೂಟದ ಭಾಗವಾಗಿವೆ. ಜಮ್ಮು ಮತ್ತು ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಣಯಗಳನ್ನು ತೆಗೆದುಕೊಳ್ಳಲು ಎಲ್ಲ ಜನಪ್ರತಿನಿಧಿಗಳ ನಡುವೆ ಮಾತುಕತೆ ಆರಂಭಿಸಲು ಮೈತ್ರಿಕೂಟ ಒಲವು ಹೊಂದಿದೆ ಎಂದು ಫಾರೂಕ್ ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮುನ್ನ ಬಂಧಿಸಲಾಗಿದ್ದ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರ ಬಿಡುಗಡೆಯ ಎರಡು ದಿನಗಳ ನಂತರ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಈ ಸಭೆ ನಡೆಸಲಾಗಿದೆ. ಮೆಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜದ್ ಲೋನ್, ಪೀಪಲ್ಸ್ ಮೂಮೆಂಟ್ ಮುಖಂಡ ಜಾವೇದ್ ಮಿರ್ ಮತ್ತು ಸಿಪಿಐಎಂ ಮುಖಂಡ ಮೊಹಮದ್ ಯೂಸುಫ್ ತಾರಿಗಮಿ ಸಭೆಯಲ್ಲಿ ಪಾಲ್ಗೊಂಡಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications