ಜಮ್ಮು & ಕಾಶ್ಮೀರ: ಕೇಂದ್ರದ ವಿರುದ್ಧ ಹೋರಾಟಕ್ಕೆ ಹೊಸ ಮೈತ್ರಿಕೂಟ ರಚನೆ
ಶ್ರೀನಗರ, ಅಕ್ಟೋಬರ್ 15: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗುರುವಾರ ಮೊದಲ ಬಾರಿಗೆ ಸಭೆ ಸೇರಿದ ಗುಪ್ಕರ್ ಘೋಷಣೆಯ ಸಹಿ ಹಾಕಿರುವ ರಾಜಕೀಯ ಪಕ್ಷಗಳು, ಕಣಿವೆಯಲ್ಲಿ ವಿಶೇಷ ಸ್ಥಾನಮಾನವನ್ನು ಮರಳಿ ಜಾರಿ ಮಾಡುವ ಹೋರಾಟದ ಗುರಿಯೊಂದಿಗೆ ಹೊಸ ಮೈತ್ರಿಕೂಟವನ್ನು ರಚಿಸಿವೆ.
'ನಮ್ಮ ಮೈತ್ರಿಕೂಟಕ್ಕೆ ಗುಪ್ಕರ್ ಘೋಷಣೆಯ ಜನರ ಮೈತ್ರಿಕೂಟ ಎಂದು ಹೆಸರಿಟ್ಟಿದ್ದೇವೆ. ನಮ್ಮ ಹೋರಾಟವು ಸಾಂವಿಧಾನಿಕ ಹೋರಾಟ. ಭಾರತ ಸರ್ಕಾರವು 2019ರ ಆಗಸ್ಟ್ 5ಕ್ಕೂ ಮುನ್ನ ರಾಜ್ಯದ ಜನತೆಗೆ ಇದ್ದ ಹಕ್ಕುಗಳನ್ನು ವಾಪಸ್ ನೀಡುವುದನ್ನು ಬಯಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ಸಾಂವಿಧಾನಿಕ ಮಾನ್ಯತೆಯನ್ನು ಮರಳಿ ತರುವ ಗುರಿ ಹೊಂದಿದ್ದೇವೆ' ಎಂದು ಆರು ರಾಜಕೀಯ ಪಕ್ಷಗಳ ಸಭೆಯ ಬಳಿಕ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ತಿಳಿಸಿದರು.
ಎನ್ಸಿ, ಪಿಡಿಪಿ, ಸಿಪಿಎಂ, ಪಿಸಿ, ಜೆಕೆಪಿಎಂ ಮತ್ತು ಎಎನ್ಸಿ ಪಕ್ಷಗಳು ಈ ನೂತನವಾಗಿ ರಚಿಸಿದ ಮೈತ್ರಿಕೂಟದ ಭಾಗವಾಗಿವೆ. ಜಮ್ಮು ಮತ್ತು ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಣಯಗಳನ್ನು ತೆಗೆದುಕೊಳ್ಳಲು ಎಲ್ಲ ಜನಪ್ರತಿನಿಧಿಗಳ ನಡುವೆ ಮಾತುಕತೆ ಆರಂಭಿಸಲು ಮೈತ್ರಿಕೂಟ ಒಲವು ಹೊಂದಿದೆ ಎಂದು ಫಾರೂಕ್ ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮುನ್ನ ಬಂಧಿಸಲಾಗಿದ್ದ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರ ಬಿಡುಗಡೆಯ ಎರಡು ದಿನಗಳ ನಂತರ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಈ ಸಭೆ ನಡೆಸಲಾಗಿದೆ. ಮೆಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜದ್ ಲೋನ್, ಪೀಪಲ್ಸ್ ಮೂಮೆಂಟ್ ಮುಖಂಡ ಜಾವೇದ್ ಮಿರ್ ಮತ್ತು ಸಿಪಿಐಎಂ ಮುಖಂಡ ಮೊಹಮದ್ ಯೂಸುಫ್ ತಾರಿಗಮಿ ಸಭೆಯಲ್ಲಿ ಪಾಲ್ಗೊಂಡಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications