Video: ಭಾರತದ ಪ್ರತಿದಾಳಿಗೆ ಪಾಕ್ ಸೇನಾ ಬಂಕರ್ ನಾಶ, 8 ಯೋಧರು ಸಾವು
ಶ್ರೀನಗರ್, ನವೆಂಬರ್.13: ಜಮ್ಮು ಕಾಶ್ಮೀರದ ಗಡಿಯಲ್ಲಿ ವಾಸ್ತವ ಗಡಿ ರೇಖೆ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯು ನಡೆಸಿರುವ ಪ್ರತಿದಾಳಿಯಲ್ಲಿ 8 ಮಂದಿ ಪಾಕಿಸ್ತಾನ ಯೋಧರು ಹತರಾಗಿದ್ದಾರೆ. ನಾಲ್ವರು ಪಾಕಿಸ್ತಾನ ಸೇನಾ ಯೋಧರು ಮತ್ತು ಮೂವರು ಪಾಕಿಸ್ತಾನ ವಿಶೇಷ ಸೇವಾ ಪಡೆ ಯೋಧರು ಸೇರಿದ್ದಾರೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.
ಭಾರತೀಯ ಸೇನೆ ನಡೆಸಿರುವ ಪ್ರತಿದಾಳಿಯಲ್ಲಿ ಪಾಕಿಸ್ತಾನದ 10 ರಿಂದ 12 ಮಂದಿ ಯೋಧರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೇನೆಗೆ ಸೇರಿದ ಸೇನಾ ಬಂಕರ್, ಪ್ಯೂಯಿಲ್ ಡಂಪ್ ಮತ್ತು ಲಾಂಚ್ ಪ್ಯಾಡ್ ನಾಶಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರ ಹಿಂಬದಿಯಲ್ಲಿ ನಿಂತು ಪಾಕಿಸ್ತಾನ ಸೇನಾ ಯೋಧರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ವಾಸ್ತವ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿದ್ದಲ್ಲದೇ ಎರಡು ಪ್ರತ್ಯೇಕ ಕಡೆಗಳಲ್ಲಿ ಕದನ ವಿರಾಮ ಉಲ್ಲಂಘಿಸಲಾಗಿದೆ. ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದರು.

ಮೂವರು ಭಾರತೀಯ ಯೋಧರು ಹುತಾತ್ಮ:
ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಗುರೇಜ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ ಒಬ್ಬ ಭಾರತೀಯ ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಶುಕ್ರವಾರ ಜಮ್ಮು ಕಾಶ್ಮೀರದ ಗಡಿಯುದ್ದಕ್ಕೂ ಹಲವು ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತು. ದವರ್, ಕೆರಾನ್, ಉರಿ ಮತ್ತು ನೌಗಮ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.
#WATCH | 7-8 Pakistan Army soldiers killed, 10-12 injured in the retaliatory firing by Indian Army in which a large number of Pakistan Army bunkers, fuel dumps, and launch pads have also been destroyed: Indian Army Sources pic.twitter.com/q3xoQ8F4tD
— ANI (@ANI) November 13, 2020
2020ರಲ್ಲಿ ಪಾಕಿಸ್ತಾನ ಸೇನೆಯು 4052 ಬಾರಿ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಲ್ಲದೇ ಗುಂಡಿನ ದಾಳಿ ನಡೆಸಿದೆ. ನವೆಂಬರ್ ನಲ್ಲಿ 128 ಬಾರಿ, ಅಕ್ಟೋಬರ್ ನಲ್ಲಿ 394 ಬಾರಿ ಕದನ ವಿರಾಮ ಉಲ್ಲಂಘಿಸಿತ್ತು. ಕಳೆದ ವರ್ಷ ಪಾಕಿಸ್ತಾನವು 3233 ಬಾರಿ ವಾಸ್ತವ ಗಡಿ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications