ಜಮ್ಮು ಕಾಶ್ಮೀರದ ಕಾರ್ಗಿಲ್ ನಲ್ಲಿ ಲಘು ಭೂಕಂಪನ
ಶ್ರೀನಗರ್, ಅಕ್ಟೋಬರ್.08: ಕಣಿವೆ ರಾಜ್ಯದಲ್ಲಿ ಗುರುವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಲಡಾಖ್ ನ ಕಾರ್ಗಿಲ್ ಪ್ರದೇಶದಲ್ಲಿ ಬೆಳಗ್ಗೆ 9 ಗಂಟೆ 22 ನಿಮಿಷಕ್ಕೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಅದರ ತೀವ್ರತೆ 4.2ರಷ್ಟು ದಾಖಲಾಗಿದೆ.
ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ ಆತಂಕಗೊಂಡ ಸ್ಥಳೀಯರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಕೆಲಹೊತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಭೂಕಂಪನದ ಬಗ್ಗೆ ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರವು ಟ್ವಿಟರ್ ನಲ್ಲಿ ಸ್ಪಷ್ಟಪಡಿಸಿದೆ.
ಲಡಾಖ್ ನ ಕಾರ್ಗಿಲ್ ಪ್ರದೇಶದಲ್ಲಿ ಅಕ್ಟೋಬರ್.08, 2020ರ ಬೆಳಗ್ಗೆ 9.22 ಗಂಟೆಗೆ ಭೂಮಿ ಕಂಪಿಸಿದೆ. 35.36ರಷ್ಟು ಲ್ಯಾಟ್, 75.81ರಷ್ಟು ಉದ್ದ 10 ಕಿಲೋ ಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ" ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಟ್ವೀಟ್ ಮಾಡಿದೆ.

ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ:
ಜಮ್ಮು ಕಾಶ್ಮೀರ ಲಡಾಖ್ ನ ಕಾರ್ಗಿಲ್ ಪ್ರದೇಶದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಕಳೆದ ಎರಡು ವಾರಗಳ ಹಿಂದೆ ಕೂಡಾ ಎರಡರಿಂದ ಮೂರು ಬಾರಿ ಜಮ್ಮು ಕಾಶ್ಮೀರದ ಹಲವೆಡೆ ಭೂಕಂಪನ ಸಂಭವಿಸಿತ್ತು. ಶ್ರೀನಗರದಲ್ಲಿ ಸಪ್ಟೆಂಬರ್.23ರ ಮಂಗಳವಾರ ರಾತ್ರಿ 9.40ರ ವೇಳೆಗೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.6ರಷ್ಟು ದಾಖಲಾಗಿತ್ತು. ಭೂಮಿಯಿಂದ 5 ಕಿಲೋ ಮೀಟರ್ ಆಳದಲ್ಲಿ ಭೂಮಿ ಕಂಪಿಸಿದ್ದು, ಭೂಕಂಪನದ ಕೇಂದ್ರಬಿಂದು ಶ್ರೀನಗರದಿಂದ ಉತ್ತರ ಭಾಗದಲ್ಲಿ 11 ಕಿಲೋ ಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿದು ಬಂದಿತ್ತು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications