ಜಮ್ಮು-ಕಾಶ್ಮೀರ ಎನ್ ಕೌಂಟರ್ ನಲ್ಲಿ 3 ಉಗ್ರರಿಗೆ ಹೆಡೆಮುರಿ
ಶ್ರೀನಗರ್, ನವೆಂಬರ್.08: ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಮತ್ತು ಗಡಿ ಭದ್ರತಾ ಸಿಬ್ಬಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರಿಗೆ ಹೆಡೆಮುರಿ ಕಟ್ಟಲಾಗಿದೆ. ಉಗ್ರರು ನಡೆಸಿರುವ ಪ್ರತಿದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಭಾನುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಜಮ್ಮು-ಕಾಶ್ಮೀರದ ಮಚಾಲಿ ಸೆಕ್ಟರ್ ನಲ್ಲಿ ಉಗ್ರರು ಅಕ್ರಮವಾಗಿ ಗಡಿ ನುಸುಳುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಗಡಿ ನಿಯಂತ್ರಣ ರೇಖೆಯಿಂದ 3.5 ಕಿಲೋ ಮೀಟರ್ ದೂರದಲ್ಲಿ ಉಗ್ರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ತಿಳಿದು ಬಂದಿದ್ದು, ಸೇನೆ ಕಾರ್ಯಾಚರಣೆಗೆ ಇಳಿಯಿತು. ಬೆಳಗಿನ ಜಾವ 4 ಗಂಟೆವರೆಗೂ ಗಡಿಯಲ್ಲಿ ಗುಂಡಿನ ಸದ್ದು ಕೇಳಿ ಬಂತು.
ಭಾನುವಾರ ಬೆಳಗ್ಗೆ 10.20 ಗಂಟೆ ಸುಮಾರಿಗೆ ಉಗ್ರರು ಮತ್ತು ಭಾರತೀಯ ಸೇನಾ ಪಡೆಯ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರ ಗಡಿ ನುಸುಳುವಿಕೆ ಯತ್ನ ವಿಫಲ:
ಕಳೆದ ಶನಿವಾರ ಮತ್ತು ಭಾನುವಾರ ಎರಡು ದಿನವೂ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರು ನುಸುಳುವಿಕೆ ಸಂಚು ರೂಪಿಸಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆ ಭಾರತೀಯ ಸೇನೆ ಮತ್ತು ಗಡಿ ಭದ್ರತಾ ಪಡೆ ಸಿಬ್ಬಂದಿ ಹಗಲಿರುಳು ತೀವ್ರ ಕಟ್ಟೆಚ್ಚರ ವಹಿಸಿತ್ತು. ಭಾನುವಾರ ಮಧ್ಯರಾತ್ರಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಗಡಿ ನುಸುಳುವಿಕೆ ತಂತ್ರವನ್ನು ವಿಫಲಗೊಳಿಸಿದೆ. ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥರೊಬ್ಬರು ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications