ಜಮ್ಮು-ಕಾಶ್ಮೀರ ಗುಂಡಿನ ದಾಳಿಯಲ್ಲಿ ಐವರು ಯೋಧರು ಹುತಾತ್ಮ
ಶ್ರೀನಗರ್, ಅಕ್ಟೋಬರ್ 11: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಘಟನೆಯಲ್ಲಿ ಭಾರತೀಯ ಸೇನೆಯ ಒಬ್ಬ ಜೂನಿಯರ್ ಕಮಿಷನ್ ಆಫೀಸರ್ ಹಾಗೂ ನಾಲ್ವರು ಯೋಧರು ಸೇರಿದಂತೆ ಐವರು ಹುತಾತ್ಮರಾಗಿದ್ದಾರೆ.
ಡಿಕೆಎಸ್ ಪ್ರದೇಶದ ಸುರಂಕೋಟೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಭಾರತೀಯ ಸೇನೆಯು ಕಾರ್ಯಾಚರಣೆ ಶುರು ಮಾಡಿತು ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಮೂರ್ನಾಲ್ಕು ಉಗ್ರರು ಅಲ್ಲಿ ಅಡಗಿ ಕುಳಿತಿರುವ ಬಗ್ಗೆ ಗೊತ್ತಾಗಿರುವುದರಿಂದ ಸೇನೆಯು ಆ ಪ್ರದೇಶವನ್ನು ಸುತ್ತುವರಿದವು.
ಸೇನಾ ಕಾರ್ಯಾಚರಣೆ ಚುರುಕುಗೊಳಿಸುತ್ತಿದ್ದಂತೆ ಅಲರ್ಟ್ ಆದ ಉಗ್ರರು ಮನಸೋ-ಇಚ್ಛೆ ಗುಂಡಿನ ದಾಳಿ ನಡೆಸಿದರು. ಇದರಿಂದಾಗಿ ಜೂನಿಯರ್ ಕಮಿಷನ್ ಆಫೀಸರ್ ಸೇರಿದಂತೆ ನಾಲ್ವರು ಇತರೆ ಶ್ರೇಣಿ ಯೋಧರು ಗಂಭೀರವಾಗಿ ಗಾಯಗೊಂಡು ಉಸಿರು ಚೆಲ್ಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಅಡಗಿದ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿಕೆ:
"ತೀವ್ರವಾಗಿ ಗಾಯಗೊಂಡ ಜೆಸಿಒ ಮತ್ತು ನಾಲ್ವರು ಯೋಧರನ್ನು ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಆದರೆ ಅವರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ" ಎಂದು ಸೇನೆಯು ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಸುರಂಕೋಟೆ ಉಪವಿಭಾಗದ ಅರಣ್ಯ ಪ್ರದೇಶದಿಂದ ಉಗ್ರರು ಒಳನುಸುಳಿರುವ ಶಂಕೆಯಿದೆ ಎಂದು ಭದ್ರತಾ ಪಡೆಗಳು ಶಂಕಿಸಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ನಿಯಂತ್ರಣ ರೇಖೆ (ಎಲ್ಒಸಿ) ಯಿಂದ ನುಸುಳಲು ಯಶಸ್ವಿಯಾದ ನಂತರ ಚಾಮರ್ ಅರಣ್ಯದಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಇರುವುದರ ಬಗ್ಗೆ ವರದಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಈ ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ಸೇನೆಯ ತಂಡಗಳು ಸ್ಥಳಕ್ಕೆ ಧಾವಿಸಿದವು ಮತ್ತು ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ" ಎಂದು ಅಧಿಕಾರಿ ಹೇಳಿದ್ದು, ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಹಿಂದೆ ಅನಂತನಾಗ್ನಲ್ಲಿ ಒಬ್ಬ ಹಾಗೂ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications