ಜಮ್ಮು ಮತ್ತು ಕಾಶ್ಮೀರಕ್ಕೆ 10 ಸಾವಿರ ಕೋಟಿ ರೂ. ಹೂಡಿಕೆ ಸಾಧ್ಯತೆ
ಶ್ರೀನಗರ, ಸೆಪ್ಟೆಂಬರ್ 3: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ 10 ಸಾವಿರ ಕೋಟಿ ರೂಗಳಿಗೂ ಅಧಿಕ ಹೂಡಿಕೆ ಹರಿದುಬರುವ ನಿರೀಕ್ಷೆ ಇದೆ.
ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶವು ಅಕ್ಟೋಬರ್ 12-14ರವರೆಗೆ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ದಿನಾಂಕ ಬದಲಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.
ಪರಿಚ್ಛೇದ 370 ರದ್ದಾದ ಬಳಿಕ ಜಮ್ಮು ಕಾಶ್ಮೀರದ ಸ್ಥಿತಿ ಹೇಗಿದೆ ಎನ್ನುವುದರ ಕುರಿತು ಅವಲೋಕಿಸಲಾಗುತ್ತದೆ. ಈಗ ಹಲವು ರಾಜಕೀಯ ಮುಖಂಡರು ಹಾಗೂ ಉದ್ಯಮಿಗಳು ಗೃಹ ಬಂಧನದಲ್ಲಿದ್ದಾರೆ.
ಜಮ್ಮು ಕಾಶ್ಮೀರ ವಾಣಿಜ್ಯ ಒಕ್ಕೂಟದ ಮಾಜಿ ಅಧ್ಯಕ್ಷ ಮುಬೀನ್ ಶಾ, ಕಾಶ್ಮೀರ ಇಕನಾಮಿಕ್ ಅಲಾಯನ್ಸ್ನ ಅಧ್ಯಕ್ಷ ಯಾಸೀನ್ ಖಾನ್ ಬಂಧನದಲ್ಲಿದ್ದಾರೆ.
ಈ ಸಮ್ಮಿತ್ ನಿರ್ಭೀತಿಯಿಂದ ಬೇರೆ ರಾಜ್ಯಗಳೊಂದಿಗೆ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ ಎಂದು ರಾಜ್ಯ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ಚೌಧರಿ ತಿಳಿಸಿದ್ದಾರೆ.
ಪಾಕ್ ಆಕ್ರಮಿತ ಪ್ರದೇಶ 2022ರೊಳಗೆ ಭಾರತದ ಭಾಗವಾಗಲಿದೆ: ಸಂಜಯ್ ರಾವತ್
ಪರಿಚ್ಛೇದ 370 ರದ್ದು ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವೂ ಕೂಡ ರದ್ದಾಯಿತು. ಈ ಘಟನೆ ಬಳಿಕ ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿ ಕೂಡ ಕುಂಠಿತವಾಗಿದೆ ಎಂದು ಹೇಳಿದ್ದಾರೆ.
ಈ ಸಮ್ಮಿತ್ನಲ್ಲಿ ಜಮ್ಮು ಕಾಶ್ಮೀರದ ಟ್ರೇಡ್ ಪ್ರೊಮೊಷನ್ ಆರ್ಗನೈಸೇಷನ್ ಹಾಗೂ ಕಾನ್ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್(ಸಿಐಐ) ಮಧ್ಯೆ ಒಪ್ಪಂದ ನಡೆಯಲಿದೆ.