ಜಮ್ಮುಕಾಶ್ಮೀರದಲ್ಲಿ ಪುಲ್ವಾಮಾ ದಾಳಿಯ ಕರಾಳ ದಿನವೇ ಸುಧಾರಿತ ಸ್ಫೋಟಕ ಪತ್ತೆ
ಶ್ರೀನಗರ್, ಫೆಬ್ರವರಿ.14: ಪುಲ್ವಾಮಾ ಉಗ್ರರ ದಾಳಿ ಕರಾಳ ದಿನದಂತೆ ಮತ್ತೊಂದು ದುಷ್ಕೃತ್ಯಕ್ಕೆ ಉಗ್ರರು ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದ ಬಸ್ ನಿಲ್ದಾಣದ ಬಳಿ 6 ಕೆಜಿ ಸುಧಾರಿತ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಮು ಪೊಲೀಸ್ ಆಯುಕ್ತ ಮುಕೇಶ್ ಸಿಂಗ್ ತಿಳಿಸಿದ್ದಾರೆ.
ಕಳೆದ ರಾತ್ರಿ ಸುಧಾರಿತ ಸ್ಫೋಟಕ ಪತ್ತೆಗೆ ಸಂಬಂಧಿಸಿದಂತೆ ಸೊಹೈಲ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಪುಲ್ವಾಮಾ ಉಗ್ರರ ದಾಳಿಗೆ ಎರಡು ವರ್ಷ ಆಗಿರುವ ಹಿನ್ನೆಲೆ ಇಂದೇ ದುಷ್ಕೃತ್ಯವನ್ನು ಎಸಗಲು ಸಂಚು ರೂಪಿಸಿರುವ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಶನಿವಾರ ರಾತ್ರಿ 15 ಸಣ್ಣ ಸುಧಾರಿತ ಸ್ಫೋಟಕಗಳು ಮತ್ತು 6 ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಅಬಿದ್ ನಾಯಕ್ ಮತ್ತು ಚಂಡೀಘರ್ ಮೂಲದ ಕ್ವಾಜಿ ವಾಸಿಮ್ ಎಂಬ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಜಮ್ಮು ಪೊಲೀಸ್ ಆಯುಕ್ತ ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.

ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆ:
ಕಣಿವೆ ರಾಜ್ಯದ ಪುಲ್ವಾಮಾ ಬಳಿ 2019ರ ಫೆಬ್ರವರಿ14ರಂದು ಉಗ್ರರ ದಾಳಿಯ ಕಹಿ ಸ್ಮರಣೆಗೆ ಎರಡನೇ ವರ್ಷ. ಭಾರತೀಯ ಸೇನೆಯ 78 ವಾಹನಗಳಲ್ಲಿ ಸಿಆರ್ ಪಿಎಫ್ ಯೋಧರು ಜಮ್ಮು-ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯ ಮೂಲಕ ತೆರಳುತ್ತಿದ್ದರು. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಪುಲ್ವಾಮಾ ಬಳಿಯ ಅವಂತಿಪೊರ್ ಸಮೀಪದಲ್ಲಿ ಸೇನಾ ವಾಹನ ಸ್ಫೋಟಗೊಂಡಿತು. ಜೈಷ್-ಇ-ಮೊಹಮ್ಮದ್ ಸಂಘಟನೆಯ ವಾಹನದಲ್ಲಿದ್ದ ಆತ್ಮಾಹುತಿ ಬಾಂಬರ್ ಕೃತ್ಯ ಇದಾಗಿತ್ತು. 22 ವರ್ಷ ವಯಸ್ಸಿನ ಆದ್ಲ್ ಅಹ್ಮದ್ ದರ್ ಈ ಕೃತ್ಯ ಎಸಗಿದ್ದ. ಈ ದುರ್ಘಟನೆಯಲ್ಲಿ 40 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾದರೆ, 39 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications