ಜಮ್ಮು-ಕಾಶ್ಮೀರದಲ್ಲಿ ನಾಪತ್ತೆಯಾದ ಯೋಧರ ಶೋಧ ಕಾರ್ಯ
ಶ್ರೀನಗರ, ಅಕ್ಟೋಬರ್ 16: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಸೋಮವಾರ ಆರಂಭಗೊಂಡ ಕಾರ್ಯಾಚರಣೆ ವೇಳೆ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಸೇರಿದಂತೆ ಇಬ್ಬರು ಯೋಧರು ನಾಪತ್ತೆಯಾದ ಹಿನ್ನೆಲೆ ಭಾರತೀಯ ಸೇನೆಯು ಶೋಧ ಕಾರ್ಯಾಚರಣೆಯನ್ನು ಶುರು ಮಾಡಿದೆ.
ಮೂಲಗಳ ಪ್ರಕಾರ, ಕಳೆದ ಗುರುವಾರ ಸಂಜೆ ಸೇನೆ ಹಾಗೂ ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ ನಡೆದ ನಂತರದಲ್ಲಿ ಒಬ್ಬ ಜೆಸಿಒ ಮತ್ತು ಒಬ್ಬ ಯೋಧ ನಾಪತ್ತೆಯಾಗಿದ್ದಾರೆ. ಈ ಹಿಂದೆ ಪೂಂಚ್ -ರಜೌರಿ ಅರಣ್ಯ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ವೇಳೆ ರೈಫಲ್ ಮ್ಯಾನ್ ಯೋಗಂಬರ್ ಸಿಂಗ್ ಮತ್ತು ರೈಫಲ್ ಮ್ಯಾನ್ ವಿಕ್ರಮ್ ಸಿಂಗ್ ನೇಗಿ ಎಂಬ ಇಬ್ಬರು ಯೋಧರು ಹುತಾತ್ಮರಾಗಿದ್ದರು. ನಾಲ್ಕು ದಿನಗಳ ನಂತರ ಅದೇ ಪ್ರದೇಶದಲ್ಲಿ ಐವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದರು.
ಪೂಂಚ್ ಮತ್ತು ರಜೌರಿ ಅರಣ್ಯ ಪ್ರದೇಶದ ಒಳಗೆ ಪ್ರವೇಶಿಸಿ ಹುತಾತ್ಮ ಯೋಧರ ಮೃತದೇಹಗಳನ್ನು ತೆಗೆದುಕೊಂಡು ಬರಬೇಕಿತ್ತು. ಈ ಹಿನ್ನೆಲೆ ಮೃತದೇಹಗಳನ್ನು ಮರಳಿ ಪಡೆಯುವುದೂ ಸಹ ಸೇನೆಗೆ ಒಂದು ದೊಡ್ಡ ಸವಾಲಾಗಿತ್ತು. ಈ ಮಧ್ಯೆ ಗುರುವಾರ ಸಂಜೆ ಹೊತ್ತಿಗೆ ಸೇನೆಯು ಜೆಸಿಒ ಜೊತೆ ಸಂಪರ್ಕ ಕಳೆದುಕೊಂಡಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ:
"ಜಮ್ಮು ಕಾಶ್ಮೀರ ಪೂಂಚ್ ಜಿಲ್ಲೆಯ ಮೆಂಧರ್ ಉಪ ವಿಭಾಗದ ನರಖಾಸ್ ಅರಣ್ಯದ ಸಾಮಾನ್ಯ ಪ್ರದೇಶದಲ್ಲಿ ನಡೆಯುತ್ತಿದೆ. ಕಳೆದ 14 ಅಕ್ಟೋಬರ್ 2021 ರಂದು ಸಂಜೆ ಸಮಯದ ವೇಳೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಸೇನಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಜೆಸಿಒ ಮತ್ತು ಒಬ್ಬ ಸೈನಿಕ ತೀವ್ರವಾಗಿ ಗಾಯಗೊಂಡಿದ್ದು, ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ," ಎಂದು ಘಟನೆ ಬಗ್ಗೆ ಸೇನೆಯು ಮಾಹಿತಿ ನೀಡಿದೆ.

ನಾಪತ್ತೆಯಾದ ಜೆಸಿಓ ಪತ್ತೆಗೆ ಶೋಧ ಕಾರ್ಯ:
ಇಬ್ಬರು ಯೋಧರು ಹುತಾತ್ಮರಾಗಿರುವ ಬಗ್ಗೆ ಶುಕ್ರವಾರ ಸೇನೆಯು ದೃಢಪಡಿಸಿದ್ದು, ನಾಪತ್ತೆಯಾಗಿರುವ ಜೆಸಿಓ ಬಗ್ಗೆ ಯಾವುದೇ ರೀತಿ ಮಾಹಿತಿ ಸಿಕ್ಕಿಲ್ಲ," ಎಂದು ಹೇಳಿದ್ದಾರೆ. ಗಾಯಗೊಂಡ ಜೆಸಿಒ ಅನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಬೆಳಿಗ್ಗೆ ಆರಂಭಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ನಾವು ಗಾಯಗೊಂಡ ಜೆಸಿಒ ಅನ್ನು ಪತ್ತೆ ಮಾಡಿ ತರುವುದಕ್ಕೆ ಶುಕ್ರವಾರ ಸಾಧ್ಯವಾಗಿಲ್ಲ, ಬೆಳಿಗ್ಗೆ ಶೋಧ ಕಾರ್ಯಾಚರಣೆಯನ್ನು ಪುನರಾರಂಭಗೊಳ್ಳುತ್ತದೆ" ಎಂದು ಅವರು ಹೇಳಿದರು.
ನರಖಾಸ್ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ:
ಶನಿವಾರ ಬೆಳಿಗ್ಗೆ ಮೆಂಧರ್ ಉಪ ವಿಭಾಗದ ನರಖಾಸ್ ಅರಣ್ಯ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಕಾಡಿನೊಳಗೆ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಹೊರಹಾಕಲು ಸೇನೆಯು ಮುಂದಾದ ಸಂದರ್ಭದಲ್ಲಿ ಸೇನೆ ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಸ್ಫೋಟದ ಸದ್ದು ಕೇಳಿಬಂದಿತು.
6ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ:
ಈ ಹಿಂದೆ ಡೇರಾ ಕಿ ಗಲಿಯಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ಸೇನೆಯು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿತು. ಆರಂಭಿಕ ಶೂಟೌಟ್ನಲ್ಲಿ, ಒಬ್ಬ ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸೇರಿದಂತೆ ಐವರು ಸೈನಿಕರು ಸಾವನ್ನಪ್ಪಿದರು. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೇನೆಯು ಒಂದೇ ಎನ್ಕೌಂಟರ್ನಲ್ಲಿ ಇಷ್ಟೊಂದು ಸಾವುನೋವುಗಳನ್ನು ಅನುಭವಿಸಿದೆ. ಈ ಪ್ರದೇಶದಲ್ಲಿ ಉಗ್ರರ ನಿಗ್ರಹಕ್ಕೆ ಸೇನೆ ಲಗ್ಗೆಯಿಟ್ಟಿತು. ಅಂದಿನಿಂದ ಸೇನೆಯು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದ್ದು, ಎನ್ಕೌಂಟರ್ ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕರನ್ನು ಕೊಲ್ಲಲಾಗಿಲ್ಲ ಎಂದು ತಿಳಿದು ಬಂದಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications