ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ ನೆಟ್ ಬಳಕೆಗೆ ನಿರ್ಬಂಧ
ಶ್ರೀನಗರ್, ಅಕ್ಟೋಬರ್.21: ಜಮ್ಮು ಕಾಶ್ಮೀರದಲ್ಲಿ ಆಡಳಿತಾರೂಢ ಪಕ್ಷವು 4ಜಿ ಮೊಬೈಲ್ ಇಂಟರ್ ನೆಟ್ ಸೇವೆ ಬಳಕೆಯ ನಿರ್ಬಂಧವನ್ನು ಮುಂದುವರಿಸಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ 2ಜಿ ಇಂಟರ್ ನೆಟ್ ಸೇವೆಯನ್ನು ಮಾತ್ರ ಬಳಸುವುದಕ್ಕೆ ಅನುಮತಿ ನೀಡಲಾಗಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಮೊದಲೇ 4ಜಿ ಮೊಬೈಲ್ ಇಂಟರ್ ನೆಟ್ ಸೇವೆ ಬಳಸುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇದೀಗ ಈ ನಿರ್ಬಂಧವನ್ನು ನವೆಂಬರ್.12ರವರೆಗೂ ವಿಸ್ತರಿಸಲು ಅಧಿಸೂಚನೆ ಹೊರಡಿಸಲಾಗಿದೆ. ಗಂದರ್ ಬಾಲ್ ಮತ್ತು ಉಧಮಪುರ್ ಜಿಲ್ಲೆಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಪ್ರೀ-ಪೇಯ್ಡ್ ಮತ್ತು ಪೋಸ್ಟ್-ಪೇಯ್ಡ್ ಸಿಮ್ ಕಾರ್ಡ್ ಗಳಲ್ಲಿ ಮಾತ್ರ ಈ 2ಜಿ ಇಂಟರ್ ನೆಟ್ ಸೇವೆಯನ್ನು ಪಡೆಯುವ ವ್ಯವಸ್ಥೆಯನ್ನು ಹೊಂದಲಾಗಿದೆ. ಇದರ ಹೊರತಾಗಿ 4ಜಿ ಇಂಟರ್ ನೆಟ್ ಬಳಕೆಗೆ ಯಾವುದೇ ಅವಕಾಶಗಳಿಲ್ಲ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಇಂಟರ್ ನೆಟ್ ಸಂಪರ್ಕವು ಯಾವುದೇ ವೇಗ ಸಂಬಂಧಿತ ನಿರ್ಬಂಧಗಳಿಲ್ಲದೆ, ಮ್ಯಾಕ್-ಬೈಂಡಿಂಗ್ ನೊಂದಿಗೆ ಲಭ್ಯವಾಗಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

2019ರಿಂದಲೂ ಇಂಟರ್ ನೆಟ್ ಸೇವೆಗೆ ನಿರ್ಬಂಧ:
ಜಮ್ಮು-ಕಾಶ್ಮೀರಕ್ಕೆ 370ರ ಕಾಯ್ದೆಯಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬೆನ್ನಲ್ಲೇ ಇಂಟರ್ ನೆಟ್ ಸಂಪರ್ಕದ ಮೇಲೆ ನಿರ್ಬಂಧ ಹೇರಲಾಗಿತ್ತು. 2019ರ ಆಗಸ್ಟ್.05ರಂದು ಮೊದಲ ಹಂತದಲ್ಲೇ ಇಂಟರ್ ನೆಟ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ತದನಂತರದಲ್ಲಿ ಜನವರಿ.25ರ ವೇಳೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಹಿನ್ನೆಲೆ 2ಜಿ ಇಂಟರ್ ನೆಟ್ ಬಳಕೆಗೆ ಅವಕಾಶ ನೀಡಲಾಗಿತ್ತು.
ಕಳೆದ ಸಪ್ಟೆಂಬರ್.30ರಂದು ಜಮ್ಮು-ಕಾಶ್ಮೀರದಲ್ಲಿ 4ಜಿ ಮೊಬೈಲ್ ಇಂಟರ್ ನೆಟ್ ಸೇವೆ ಬಳಕೆ ಮೇಲಿನ ನಿರ್ಬಂಧವನ್ನು ಅಕ್ಟೋಬರ್.21ರವರೆಗೂ ವಿಸ್ತರಿಸಲಾಗಿತ್ತು. ಇದೀಗ ಅಕ್ಟೋಬರ್.21ರಿಂದ ನವೆಂಬರ್.12ರವರೆಗೂ ವಿಸ್ತರಣೆಯನ್ನು ಮುಂದುವರಿಸಲಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications